AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಸಿಬ್ಬಂದಿ,ಅಧಿಕಾರಿಗಳು ಗಡ್ಡ ಬಿಡುವಂತಿಲ್ಲ; ಜೀನ್ಸ್- ಟೀಶರ್ಟ್ ಧರಿಸುವಂತಿಲ್ಲ

CBI: ಸಿಬಿಐನ ಮಹಿಳಾ ಉದ್ಯೋಗಿಗಳಿಗೆ ಸೀರೆ, ಸೂಟ್, ಫಾರ್ಮಲ್ ಶರ್ಟ್ ಮತ್ತು ಪ್ಯಾಂಟ್ ಮಾತ್ರ ಧರಿಸಲು ಹೇಳಲಾಗಿದೆ. "ಯಾವುದೇ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳು, ಚಪ್ಪಲಿಗಳು ಮತ್ತು ಕ್ಯಾಶುಯಲ್ ಉಡುಪನ್ನು ಕಚೇರಿಯಲ್ಲಿ ಅನುಮತಿಸಲಾಗುವುದಿಲ್ಲ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಿಬಿಐ ಸಿಬ್ಬಂದಿ,ಅಧಿಕಾರಿಗಳು ಗಡ್ಡ ಬಿಡುವಂತಿಲ್ಲ; ಜೀನ್ಸ್- ಟೀಶರ್ಟ್ ಧರಿಸುವಂತಿಲ್ಲ
ಸುಭೋದ್​ ಕುಮಾರ್ ಜೈಸ್ವಾಲ್​
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 04, 2021 | 6:04 PM

Share

ದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕಚೇರಿಯಲ್ಲಿ ಫಾರ್ಮಲ್ ಉಡುಗೆ ಧರಿಸಬೇಕು. ಜೀನ್ಸ್ ಮತ್ತು ಸ್ಪೋರ್ಟ್ಸ್ ಶೂಗಳಂತಹ ಯಾವುದೇ ಕ್ಯಾಶುಯಲ್ ಉಡುಗೆಗಳನ್ನು ಧರಿಸುವಂತಿಲ್ಲ ಏಜೆನ್ಸಿಯ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಹೇಳಿದ್ದಾರೆ. ಜೈಸ್ವಾಲ್ ಅವರ ಆದೇಶ ಪ್ರಕಾರ, ಪುರುಷರ ಡ್ರೆಸ್ ಕೋಡ್ ಶರ್ಟ್, ಫಾರ್ಮಲ್ ಪ್ಯಾಂಟ್ ಮತ್ತು ಫಾರ್ಮಲ್ ಬೂಟುಗಳಾಗಿರುತ್ತದೆ. ಅವರು ಗಡ್ಡ ಬಿಡಬಾರದು, ಕ್ಲೀನ್ ಶೇವ್ ಮಾಡಿರಬೇಕು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಸಿಬಿಐನ ಮಹಿಳಾ ಉದ್ಯೋಗಿಗಳಿಗೆ ಸೀರೆ, ಸೂಟ್, ಫಾರ್ಮಲ್ ಶರ್ಟ್ ಮತ್ತು ಪ್ಯಾಂಟ್ ಮಾತ್ರ ಧರಿಸಲು ಹೇಳಲಾಗಿದೆ. “ಯಾವುದೇ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳು, ಚಪ್ಪಲಿಗಳು ಮತ್ತು ಕ್ಯಾಶುಯಲ್ ಉಡುಪನ್ನು ಕಚೇರಿಯಲ್ಲಿ ಅನುಮತಿಸಲಾಗುವುದಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದೇಶಾದಾದ್ಯಂತ ಸಿಬಿಐ ಕಚೇರಿಗಳಿಗೆ ಈ ನಿಯಮಗಳನ್ನು ಅನ್ವಯಿಸಲಾಗುವುದು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಶಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಹೆಸರು ಹೇಳಲಿಚ್ಛಿಸದೆ ಈ ಕುರಿತು ಮಾತನಾಡಿದ ಸಿಬಿಐ ಅಧಿಕಾರಿಯೊಬ್ಬರು ಇದು ಸಮತೋಲಿತ ಆದೇಶ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಯಾವಾಗಲೂ ಫಾರ್ಮಲ್ ಉಡುಗೆ ಧರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

“ಆದಾಗ್ಯೂ, ವರ್ಷಗಳ ಹಿಂದೆಯಷ್ಟೇ ಜನರು ಕ್ಯಾಶುಯಲ್ ಧರಿಸಲು ಪ್ರಾರಂಭಿಸಿದರು.ಜೀನ್ಸ್ ಮತ್ತು ಟೀ ಶರ್ಟ್ ಧರಿಸುತ್ತಿದ್ದರೂ ಯಾರೂ ಅದನ್ನು ನಿಲ್ಲಿಸಲಿಲ್ಲ. ಸಿಬಿಐ ಅಧಿಕಾರಿಗಳು ಕನಿಷ್ಠ ಫಾರ್ಮ್ಲ್ ಕಾಲರ್ಡ್ ಶರ್ಟ್, ಪ್ಯಾಂಟ್ ಮತ್ತು ಬೂಟುಗಳನ್ನು ಧರಿಸಬೇಕು ”ಎಂದು ಆ ಅಧಿಕಾರಿ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಉಲ್ಲೇಖಿಸಿದೆ.

ಜೈಸ್ವಾಲ್ ಕಳೆದ ವಾರ ಏಜೆನ್ಸಿಯ 33 ನೇ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅವರು ಸಿಬಿಐನ ದಕ್ಷತೆಯನ್ನು ಸುಧಾರಿಸಲು ಕೆಲವು ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.

ಇದನ್ನೂ  ಓದಿ: ಒಂದೂ ಭ್ರಷ್ಟಾಚಾರ ಕಳಂಕ ಇಲ್ಲದ ಸುಬೋಧ್​ ಕುಮಾರ್​ ಜೈಸ್ವಾಲ್​ ಸಿಬಿಐ ನೂತನ ನಿರ್ದೇಶಕ; ಇನ್ನೆರಡು ವರ್ಷ ಅಧಿಕಾರ ಅವಧಿ

Published On - 6:01 pm, Fri, 4 June 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್