AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಸಿಬ್ಬಂದಿ,ಅಧಿಕಾರಿಗಳು ಗಡ್ಡ ಬಿಡುವಂತಿಲ್ಲ; ಜೀನ್ಸ್- ಟೀಶರ್ಟ್ ಧರಿಸುವಂತಿಲ್ಲ

CBI: ಸಿಬಿಐನ ಮಹಿಳಾ ಉದ್ಯೋಗಿಗಳಿಗೆ ಸೀರೆ, ಸೂಟ್, ಫಾರ್ಮಲ್ ಶರ್ಟ್ ಮತ್ತು ಪ್ಯಾಂಟ್ ಮಾತ್ರ ಧರಿಸಲು ಹೇಳಲಾಗಿದೆ. "ಯಾವುದೇ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳು, ಚಪ್ಪಲಿಗಳು ಮತ್ತು ಕ್ಯಾಶುಯಲ್ ಉಡುಪನ್ನು ಕಚೇರಿಯಲ್ಲಿ ಅನುಮತಿಸಲಾಗುವುದಿಲ್ಲ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಿಬಿಐ ಸಿಬ್ಬಂದಿ,ಅಧಿಕಾರಿಗಳು ಗಡ್ಡ ಬಿಡುವಂತಿಲ್ಲ; ಜೀನ್ಸ್- ಟೀಶರ್ಟ್ ಧರಿಸುವಂತಿಲ್ಲ
ಸುಭೋದ್​ ಕುಮಾರ್ ಜೈಸ್ವಾಲ್​
TV9 Web
| Edited By: |

Updated on:Jun 04, 2021 | 6:04 PM

Share

ದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕಚೇರಿಯಲ್ಲಿ ಫಾರ್ಮಲ್ ಉಡುಗೆ ಧರಿಸಬೇಕು. ಜೀನ್ಸ್ ಮತ್ತು ಸ್ಪೋರ್ಟ್ಸ್ ಶೂಗಳಂತಹ ಯಾವುದೇ ಕ್ಯಾಶುಯಲ್ ಉಡುಗೆಗಳನ್ನು ಧರಿಸುವಂತಿಲ್ಲ ಏಜೆನ್ಸಿಯ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಹೇಳಿದ್ದಾರೆ. ಜೈಸ್ವಾಲ್ ಅವರ ಆದೇಶ ಪ್ರಕಾರ, ಪುರುಷರ ಡ್ರೆಸ್ ಕೋಡ್ ಶರ್ಟ್, ಫಾರ್ಮಲ್ ಪ್ಯಾಂಟ್ ಮತ್ತು ಫಾರ್ಮಲ್ ಬೂಟುಗಳಾಗಿರುತ್ತದೆ. ಅವರು ಗಡ್ಡ ಬಿಡಬಾರದು, ಕ್ಲೀನ್ ಶೇವ್ ಮಾಡಿರಬೇಕು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಸಿಬಿಐನ ಮಹಿಳಾ ಉದ್ಯೋಗಿಗಳಿಗೆ ಸೀರೆ, ಸೂಟ್, ಫಾರ್ಮಲ್ ಶರ್ಟ್ ಮತ್ತು ಪ್ಯಾಂಟ್ ಮಾತ್ರ ಧರಿಸಲು ಹೇಳಲಾಗಿದೆ. “ಯಾವುದೇ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳು, ಚಪ್ಪಲಿಗಳು ಮತ್ತು ಕ್ಯಾಶುಯಲ್ ಉಡುಪನ್ನು ಕಚೇರಿಯಲ್ಲಿ ಅನುಮತಿಸಲಾಗುವುದಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದೇಶಾದಾದ್ಯಂತ ಸಿಬಿಐ ಕಚೇರಿಗಳಿಗೆ ಈ ನಿಯಮಗಳನ್ನು ಅನ್ವಯಿಸಲಾಗುವುದು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಶಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಹೆಸರು ಹೇಳಲಿಚ್ಛಿಸದೆ ಈ ಕುರಿತು ಮಾತನಾಡಿದ ಸಿಬಿಐ ಅಧಿಕಾರಿಯೊಬ್ಬರು ಇದು ಸಮತೋಲಿತ ಆದೇಶ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಯಾವಾಗಲೂ ಫಾರ್ಮಲ್ ಉಡುಗೆ ಧರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

“ಆದಾಗ್ಯೂ, ವರ್ಷಗಳ ಹಿಂದೆಯಷ್ಟೇ ಜನರು ಕ್ಯಾಶುಯಲ್ ಧರಿಸಲು ಪ್ರಾರಂಭಿಸಿದರು.ಜೀನ್ಸ್ ಮತ್ತು ಟೀ ಶರ್ಟ್ ಧರಿಸುತ್ತಿದ್ದರೂ ಯಾರೂ ಅದನ್ನು ನಿಲ್ಲಿಸಲಿಲ್ಲ. ಸಿಬಿಐ ಅಧಿಕಾರಿಗಳು ಕನಿಷ್ಠ ಫಾರ್ಮ್ಲ್ ಕಾಲರ್ಡ್ ಶರ್ಟ್, ಪ್ಯಾಂಟ್ ಮತ್ತು ಬೂಟುಗಳನ್ನು ಧರಿಸಬೇಕು ”ಎಂದು ಆ ಅಧಿಕಾರಿ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಉಲ್ಲೇಖಿಸಿದೆ.

ಜೈಸ್ವಾಲ್ ಕಳೆದ ವಾರ ಏಜೆನ್ಸಿಯ 33 ನೇ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅವರು ಸಿಬಿಐನ ದಕ್ಷತೆಯನ್ನು ಸುಧಾರಿಸಲು ಕೆಲವು ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.

ಇದನ್ನೂ  ಓದಿ: ಒಂದೂ ಭ್ರಷ್ಟಾಚಾರ ಕಳಂಕ ಇಲ್ಲದ ಸುಬೋಧ್​ ಕುಮಾರ್​ ಜೈಸ್ವಾಲ್​ ಸಿಬಿಐ ನೂತನ ನಿರ್ದೇಶಕ; ಇನ್ನೆರಡು ವರ್ಷ ಅಧಿಕಾರ ಅವಧಿ

Published On - 6:01 pm, Fri, 4 June 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ