AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Mar 27, 2022 | 9:40 PM

Share

2012ರಲ್ಲಿ ನಡೆದ ಬ್ಯಾಂಕ್​ ವಂಚನೆ ಪ್ರಕರಣದ ಆರೋಪಿಯೊಬ್ಬನನ್ನು ಸಿಬಿಐ (CBI) ಈಗ ಬಂಧಿಸಿದೆ. ಅಂದರೆ ಬರೋಬ್ಬರಿ 10 ವರ್ಷಗಳ ನಂತರ ಆರೋಪಿಯ ಅರೆಸ್ಟ್ ಆಗಿದೆ. ಬಂಧಿತ ಗುಜರಾತ್ ಮೂಲದ ಉದ್ಯಮಿ ಸಂಜಯ್​ ಆರ್​ ಗುಪ್ತಾ. ನೋವಾ ಶಿಪ್ಪಿಂಗ್​ ಪ್ರೈವೇಟ್​ ಲಿಮಿಟೆಡ್​​ನಲ್ಲಿ ನಿರ್ದೇಶಕನಾಗಿದ್ದು, ಬ್ಯಾಂಕ್​​ಗಳಿಗೆ ಸುಮಾರು 20 ಕೋಟಿ ರೂಪಾಯಿ ವಂಚನೆ (Bank Fraud) ಮಾಡಿ, ಪ್ರಕರಣ ದಾಖಲಾಗುತ್ತಿದ್ದಂತೆ ಕೀನ್ಯಾದ ನೈರೋಬಿಗೆ ಪರಾರಿಯಾಗಿದ್ದ.  ಅಂದು ಸಿಬಿಐ  ಗುಪ್ತಾ ವಿರುದ್ಧ ಲುಕ್​ಔಟ್ ನೋಟಿಸ್​, ರೆಡ್​ ಕಾರ್ನರ್​ ನೋಟಿಸ್​, ಇಂಟರ್​ಪೋಲ್ ನೋಟಿಸ್​ಗಳನ್ನು ಜಾರಿ ಮಾಡಿತ್ತು. ಇದೀಗ ನೈರೋಬಿಯಿಂದ ವಾಪಸ್ ಆಗುತ್ತಿದ್ದಂತೆ ಸಿಬಿಐ ಬಂಧಿಸಿದೆ.

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು. ಈ ಕಂಪನಿ ಸುಮಾರು 20.68 ಕೋಟಿ ರೂಪಾಯಿ ವಂಚನೆ ಮಾಡಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿತ್ತು. ಅದರ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿಯನ್ನು ಬಂಧಿಸಿರುವ ಸಿಬಿಐ ಅಹ್ಮದಾಬಾದ್​ನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಉದ್ಯಮಿಯನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿದೆ.

ಈ ಬಗ್ಗೆ ಸಿಬಿಐ ವಕ್ತಾರ ಆರ್.ಸಿ.ಜೋಶಿ ಪ್ರತಿಕ್ರಿಯೆ ನೀಡಿದ್ದು, ತನಿಖೆಯೆಲ್ಲ ಸಂಪೂರ್ಣವಾಗಿ ಪೂರ್ಣಗೊಂಡು ಗುಪ್ತಾ ಸೇರಿ ಎಂಟು ಆರೋಪಿಗಳ ವಿರುದ್ಧ 2013ರಲ್ಲಿಯೇ ಚಾರ್ಜ್​ಶೀಟ್ ದಾಖಲಾಗಿದೆ. ಗುಪ್ತಾ ತುಂಬ ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇದೀಗ ಬಂಧಿಸಲಾಗಿದ್ದು, ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?