AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 27, 2022 | 9:40 PM

Share

2012ರಲ್ಲಿ ನಡೆದ ಬ್ಯಾಂಕ್​ ವಂಚನೆ ಪ್ರಕರಣದ ಆರೋಪಿಯೊಬ್ಬನನ್ನು ಸಿಬಿಐ (CBI) ಈಗ ಬಂಧಿಸಿದೆ. ಅಂದರೆ ಬರೋಬ್ಬರಿ 10 ವರ್ಷಗಳ ನಂತರ ಆರೋಪಿಯ ಅರೆಸ್ಟ್ ಆಗಿದೆ. ಬಂಧಿತ ಗುಜರಾತ್ ಮೂಲದ ಉದ್ಯಮಿ ಸಂಜಯ್​ ಆರ್​ ಗುಪ್ತಾ. ನೋವಾ ಶಿಪ್ಪಿಂಗ್​ ಪ್ರೈವೇಟ್​ ಲಿಮಿಟೆಡ್​​ನಲ್ಲಿ ನಿರ್ದೇಶಕನಾಗಿದ್ದು, ಬ್ಯಾಂಕ್​​ಗಳಿಗೆ ಸುಮಾರು 20 ಕೋಟಿ ರೂಪಾಯಿ ವಂಚನೆ (Bank Fraud) ಮಾಡಿ, ಪ್ರಕರಣ ದಾಖಲಾಗುತ್ತಿದ್ದಂತೆ ಕೀನ್ಯಾದ ನೈರೋಬಿಗೆ ಪರಾರಿಯಾಗಿದ್ದ.  ಅಂದು ಸಿಬಿಐ  ಗುಪ್ತಾ ವಿರುದ್ಧ ಲುಕ್​ಔಟ್ ನೋಟಿಸ್​, ರೆಡ್​ ಕಾರ್ನರ್​ ನೋಟಿಸ್​, ಇಂಟರ್​ಪೋಲ್ ನೋಟಿಸ್​ಗಳನ್ನು ಜಾರಿ ಮಾಡಿತ್ತು. ಇದೀಗ ನೈರೋಬಿಯಿಂದ ವಾಪಸ್ ಆಗುತ್ತಿದ್ದಂತೆ ಸಿಬಿಐ ಬಂಧಿಸಿದೆ.

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು. ಈ ಕಂಪನಿ ಸುಮಾರು 20.68 ಕೋಟಿ ರೂಪಾಯಿ ವಂಚನೆ ಮಾಡಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿತ್ತು. ಅದರ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿಯನ್ನು ಬಂಧಿಸಿರುವ ಸಿಬಿಐ ಅಹ್ಮದಾಬಾದ್​ನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಉದ್ಯಮಿಯನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿದೆ.

ಈ ಬಗ್ಗೆ ಸಿಬಿಐ ವಕ್ತಾರ ಆರ್.ಸಿ.ಜೋಶಿ ಪ್ರತಿಕ್ರಿಯೆ ನೀಡಿದ್ದು, ತನಿಖೆಯೆಲ್ಲ ಸಂಪೂರ್ಣವಾಗಿ ಪೂರ್ಣಗೊಂಡು ಗುಪ್ತಾ ಸೇರಿ ಎಂಟು ಆರೋಪಿಗಳ ವಿರುದ್ಧ 2013ರಲ್ಲಿಯೇ ಚಾರ್ಜ್​ಶೀಟ್ ದಾಖಲಾಗಿದೆ. ಗುಪ್ತಾ ತುಂಬ ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇದೀಗ ಬಂಧಿಸಲಾಗಿದ್ದು, ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ