AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 27, 2022 | 9:40 PM

Share

2012ರಲ್ಲಿ ನಡೆದ ಬ್ಯಾಂಕ್​ ವಂಚನೆ ಪ್ರಕರಣದ ಆರೋಪಿಯೊಬ್ಬನನ್ನು ಸಿಬಿಐ (CBI) ಈಗ ಬಂಧಿಸಿದೆ. ಅಂದರೆ ಬರೋಬ್ಬರಿ 10 ವರ್ಷಗಳ ನಂತರ ಆರೋಪಿಯ ಅರೆಸ್ಟ್ ಆಗಿದೆ. ಬಂಧಿತ ಗುಜರಾತ್ ಮೂಲದ ಉದ್ಯಮಿ ಸಂಜಯ್​ ಆರ್​ ಗುಪ್ತಾ. ನೋವಾ ಶಿಪ್ಪಿಂಗ್​ ಪ್ರೈವೇಟ್​ ಲಿಮಿಟೆಡ್​​ನಲ್ಲಿ ನಿರ್ದೇಶಕನಾಗಿದ್ದು, ಬ್ಯಾಂಕ್​​ಗಳಿಗೆ ಸುಮಾರು 20 ಕೋಟಿ ರೂಪಾಯಿ ವಂಚನೆ (Bank Fraud) ಮಾಡಿ, ಪ್ರಕರಣ ದಾಖಲಾಗುತ್ತಿದ್ದಂತೆ ಕೀನ್ಯಾದ ನೈರೋಬಿಗೆ ಪರಾರಿಯಾಗಿದ್ದ.  ಅಂದು ಸಿಬಿಐ  ಗುಪ್ತಾ ವಿರುದ್ಧ ಲುಕ್​ಔಟ್ ನೋಟಿಸ್​, ರೆಡ್​ ಕಾರ್ನರ್​ ನೋಟಿಸ್​, ಇಂಟರ್​ಪೋಲ್ ನೋಟಿಸ್​ಗಳನ್ನು ಜಾರಿ ಮಾಡಿತ್ತು. ಇದೀಗ ನೈರೋಬಿಯಿಂದ ವಾಪಸ್ ಆಗುತ್ತಿದ್ದಂತೆ ಸಿಬಿಐ ಬಂಧಿಸಿದೆ.

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು. ಈ ಕಂಪನಿ ಸುಮಾರು 20.68 ಕೋಟಿ ರೂಪಾಯಿ ವಂಚನೆ ಮಾಡಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿತ್ತು. ಅದರ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿಯನ್ನು ಬಂಧಿಸಿರುವ ಸಿಬಿಐ ಅಹ್ಮದಾಬಾದ್​ನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಉದ್ಯಮಿಯನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿದೆ.

ಈ ಬಗ್ಗೆ ಸಿಬಿಐ ವಕ್ತಾರ ಆರ್.ಸಿ.ಜೋಶಿ ಪ್ರತಿಕ್ರಿಯೆ ನೀಡಿದ್ದು, ತನಿಖೆಯೆಲ್ಲ ಸಂಪೂರ್ಣವಾಗಿ ಪೂರ್ಣಗೊಂಡು ಗುಪ್ತಾ ಸೇರಿ ಎಂಟು ಆರೋಪಿಗಳ ವಿರುದ್ಧ 2013ರಲ್ಲಿಯೇ ಚಾರ್ಜ್​ಶೀಟ್ ದಾಖಲಾಗಿದೆ. ಗುಪ್ತಾ ತುಂಬ ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇದೀಗ ಬಂಧಿಸಲಾಗಿದ್ದು, ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ