AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು.

ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 27, 2022 | 9:40 PM

Share

2012ರಲ್ಲಿ ನಡೆದ ಬ್ಯಾಂಕ್​ ವಂಚನೆ ಪ್ರಕರಣದ ಆರೋಪಿಯೊಬ್ಬನನ್ನು ಸಿಬಿಐ (CBI) ಈಗ ಬಂಧಿಸಿದೆ. ಅಂದರೆ ಬರೋಬ್ಬರಿ 10 ವರ್ಷಗಳ ನಂತರ ಆರೋಪಿಯ ಅರೆಸ್ಟ್ ಆಗಿದೆ. ಬಂಧಿತ ಗುಜರಾತ್ ಮೂಲದ ಉದ್ಯಮಿ ಸಂಜಯ್​ ಆರ್​ ಗುಪ್ತಾ. ನೋವಾ ಶಿಪ್ಪಿಂಗ್​ ಪ್ರೈವೇಟ್​ ಲಿಮಿಟೆಡ್​​ನಲ್ಲಿ ನಿರ್ದೇಶಕನಾಗಿದ್ದು, ಬ್ಯಾಂಕ್​​ಗಳಿಗೆ ಸುಮಾರು 20 ಕೋಟಿ ರೂಪಾಯಿ ವಂಚನೆ (Bank Fraud) ಮಾಡಿ, ಪ್ರಕರಣ ದಾಖಲಾಗುತ್ತಿದ್ದಂತೆ ಕೀನ್ಯಾದ ನೈರೋಬಿಗೆ ಪರಾರಿಯಾಗಿದ್ದ.  ಅಂದು ಸಿಬಿಐ  ಗುಪ್ತಾ ವಿರುದ್ಧ ಲುಕ್​ಔಟ್ ನೋಟಿಸ್​, ರೆಡ್​ ಕಾರ್ನರ್​ ನೋಟಿಸ್​, ಇಂಟರ್​ಪೋಲ್ ನೋಟಿಸ್​ಗಳನ್ನು ಜಾರಿ ಮಾಡಿತ್ತು. ಇದೀಗ ನೈರೋಬಿಯಿಂದ ವಾಪಸ್ ಆಗುತ್ತಿದ್ದಂತೆ ಸಿಬಿಐ ಬಂಧಿಸಿದೆ.

2012ರ ಜೂನ್​​ನಲ್ಲಿ ಮೊಟ್ಟಮೊದಲು ಅಹ್ಮದಾಬಾದ್​​ನ ಕೆನರಾ ಬ್ಯಾಂಕ್​ ಈ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದರೆ ಇಡೀ ನೋವಾ ಶಿಪ್ಪಿಂಗ್​ ಮತ್ತು ಅದರ ನಿರ್ದೇಶಕರು, ಪ್ರಚಾರಕರ ವಿರುದ್ಧ ದೂರು ನೀಡಿತ್ತು. ಈ ಕಂಪನಿ ಸುಮಾರು 20.68 ಕೋಟಿ ರೂಪಾಯಿ ವಂಚನೆ ಮಾಡಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿತ್ತು. ಅದರ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿಯನ್ನು ಬಂಧಿಸಿರುವ ಸಿಬಿಐ ಅಹ್ಮದಾಬಾದ್​ನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಉದ್ಯಮಿಯನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿದೆ.

ಈ ಬಗ್ಗೆ ಸಿಬಿಐ ವಕ್ತಾರ ಆರ್.ಸಿ.ಜೋಶಿ ಪ್ರತಿಕ್ರಿಯೆ ನೀಡಿದ್ದು, ತನಿಖೆಯೆಲ್ಲ ಸಂಪೂರ್ಣವಾಗಿ ಪೂರ್ಣಗೊಂಡು ಗುಪ್ತಾ ಸೇರಿ ಎಂಟು ಆರೋಪಿಗಳ ವಿರುದ್ಧ 2013ರಲ್ಲಿಯೇ ಚಾರ್ಜ್​ಶೀಟ್ ದಾಖಲಾಗಿದೆ. ಗುಪ್ತಾ ತುಂಬ ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇದೀಗ ಬಂಧಿಸಲಾಗಿದ್ದು, ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ