AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ

ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ
ಸಿಬಿಐ
TV9 Web
| Edited By: |

Updated on: Oct 26, 2021 | 7:31 PM

Share

ನವದೆಹಲಿ: ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗಳ ನವೀಕರಣದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಭಾರತೀಯ ನೌಕಾಪಡೆ ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ಆರಂಭಿಸಿದೆ. ರಷ್ಯಾ ಮೂಲದ ಜಲಾಂತರ್ಗಾಮಿ ನೌಕೆಗಳು ಭಾರತ ಮತ್ತು ವಿದೇಶಗಳಲ್ಲಿ ಮರು ಹೊಂದಿಸಲ್ಪಟ್ಟಿವೆ ಮತ್ತು ಭಾರತೀಯ ನೌಕಾಪಡೆಯ ಮುಖ್ಯ ಆಧಾರವಾಗಿದೆ. ಇತ್ತೀಚಿನ ದಿನಗಳಲ್ಲಿ ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡಂತೆ ಹಲವು ಸೂಕ್ಷ್ಮ ಮಾಹಿತಿ ಸೋರಿಕೆ ಪ್ರಕರಣಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ನೌಕಾಪಡೆಯ ಮತ್ತಷ್ಟು ಅಧಿಕಾರಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಗೌಪ್ಯ ಮಾಹಿತಿಗಳ ಸೋರಿಕೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳು ಭಾಗಿಯಾಗಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನೌಕಾಪಡೆಯಲ್ಲಿ ಕಮಾಂಡರ್ ಹುದ್ದೆಯಲ್ಲಿರುವ ಓರ್ವ ಅಧಿಕಾರಿ ವಿರುದ್ಧ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ ಹೊರಿಸಲಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಇಬ್ಬರು ನಿವೃತ್ತ ಅಧಿಕಾರಿಗಳೂ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದ್ದು, ಅವರಿಬ್ಬರನ್ನೂ ಬಂಧಿಸಿರುವ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಸೋವಿಯತ್ ಒಕ್ಕೂಟದಲ್ಲಿ ವಿನ್ಯಾಸಗೊಳಿಸಿರುವ ಕಿಲೋ ವರ್ಗದ ಜಲಾಂತರ್ಗಾಮಿ ನೌಕೆಗಳನ್ನು ಹಲವಾರು ದೇಶಗಳ ನೌಕಾಪಡೆಯಲ್ಲಿ ಸೇವೆಗೆ ಬಳಸಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಈ ಜಲಾಂತರ್ಗಾಮಿ ನೌಕೆಗಳನ್ನು ಸಿಂಧುಘೋಷ್ ವರ್ಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ಇಲ್ಲಿಯವರೆಗೆ ಸರ್ಕಾರವು ಇಂತಹ 10 ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸಿದೆ. ಈ ನೌಕೆಗಳನ್ನು ಇದೀಗ ನವೀಕರಿಸಲಾಗುತ್ತಿದ್ದು, ನವೀಕರಣದ ಮಾಹಿತಿಯನ್ನು ಈ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೌಕಾಪಡೆಯ ಒಬ್ಬರು ಹಾಲಿ ಅಧಿಕಾರಿ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಬಂಧಿಸಿ, ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​