AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ

ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ
ಸಿಬಿಐ
TV9 Web
| Edited By: |

Updated on: Oct 26, 2021 | 7:31 PM

Share

ನವದೆಹಲಿ: ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗಳ ನವೀಕರಣದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಭಾರತೀಯ ನೌಕಾಪಡೆ ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ಆರಂಭಿಸಿದೆ. ರಷ್ಯಾ ಮೂಲದ ಜಲಾಂತರ್ಗಾಮಿ ನೌಕೆಗಳು ಭಾರತ ಮತ್ತು ವಿದೇಶಗಳಲ್ಲಿ ಮರು ಹೊಂದಿಸಲ್ಪಟ್ಟಿವೆ ಮತ್ತು ಭಾರತೀಯ ನೌಕಾಪಡೆಯ ಮುಖ್ಯ ಆಧಾರವಾಗಿದೆ. ಇತ್ತೀಚಿನ ದಿನಗಳಲ್ಲಿ ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡಂತೆ ಹಲವು ಸೂಕ್ಷ್ಮ ಮಾಹಿತಿ ಸೋರಿಕೆ ಪ್ರಕರಣಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ನೌಕಾಪಡೆಯ ಮತ್ತಷ್ಟು ಅಧಿಕಾರಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಗೌಪ್ಯ ಮಾಹಿತಿಗಳ ಸೋರಿಕೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳು ಭಾಗಿಯಾಗಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನೌಕಾಪಡೆಯಲ್ಲಿ ಕಮಾಂಡರ್ ಹುದ್ದೆಯಲ್ಲಿರುವ ಓರ್ವ ಅಧಿಕಾರಿ ವಿರುದ್ಧ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ ಹೊರಿಸಲಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಇಬ್ಬರು ನಿವೃತ್ತ ಅಧಿಕಾರಿಗಳೂ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದ್ದು, ಅವರಿಬ್ಬರನ್ನೂ ಬಂಧಿಸಿರುವ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಸೋವಿಯತ್ ಒಕ್ಕೂಟದಲ್ಲಿ ವಿನ್ಯಾಸಗೊಳಿಸಿರುವ ಕಿಲೋ ವರ್ಗದ ಜಲಾಂತರ್ಗಾಮಿ ನೌಕೆಗಳನ್ನು ಹಲವಾರು ದೇಶಗಳ ನೌಕಾಪಡೆಯಲ್ಲಿ ಸೇವೆಗೆ ಬಳಸಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಈ ಜಲಾಂತರ್ಗಾಮಿ ನೌಕೆಗಳನ್ನು ಸಿಂಧುಘೋಷ್ ವರ್ಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ಇಲ್ಲಿಯವರೆಗೆ ಸರ್ಕಾರವು ಇಂತಹ 10 ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸಿದೆ. ಈ ನೌಕೆಗಳನ್ನು ಇದೀಗ ನವೀಕರಿಸಲಾಗುತ್ತಿದ್ದು, ನವೀಕರಣದ ಮಾಹಿತಿಯನ್ನು ಈ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೌಕಾಪಡೆಯ ಒಬ್ಬರು ಹಾಲಿ ಅಧಿಕಾರಿ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಬಂಧಿಸಿ, ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!