AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ

ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Indian Navy: ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ನೌಕಾಪಡೆ ಅಧಿಕಾರಿಯ ಬಂಧನ
ಸಿಬಿಐ
TV9 Web
| Edited By: |

Updated on: Oct 26, 2021 | 7:31 PM

Share

ನವದೆಹಲಿ: ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗಳ ನವೀಕರಣದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ನೌಕಾ ಪಡೆಯ ಕರ್ತವ್ಯನಿರತ ಹಿರಿಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಭಾರತೀಯ ನೌಕಾಪಡೆ ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ಆರಂಭಿಸಿದೆ. ರಷ್ಯಾ ಮೂಲದ ಜಲಾಂತರ್ಗಾಮಿ ನೌಕೆಗಳು ಭಾರತ ಮತ್ತು ವಿದೇಶಗಳಲ್ಲಿ ಮರು ಹೊಂದಿಸಲ್ಪಟ್ಟಿವೆ ಮತ್ತು ಭಾರತೀಯ ನೌಕಾಪಡೆಯ ಮುಖ್ಯ ಆಧಾರವಾಗಿದೆ. ಇತ್ತೀಚಿನ ದಿನಗಳಲ್ಲಿ ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡಂತೆ ಹಲವು ಸೂಕ್ಷ್ಮ ಮಾಹಿತಿ ಸೋರಿಕೆ ಪ್ರಕರಣಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ನೌಕಾಪಡೆಯ ಮತ್ತಷ್ಟು ಅಧಿಕಾರಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಗೌಪ್ಯ ಮಾಹಿತಿಗಳ ಸೋರಿಕೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳು ಭಾಗಿಯಾಗಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನೌಕಾಪಡೆಯಲ್ಲಿ ಕಮಾಂಡರ್ ಹುದ್ದೆಯಲ್ಲಿರುವ ಓರ್ವ ಅಧಿಕಾರಿ ವಿರುದ್ಧ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ ಹೊರಿಸಲಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಇಬ್ಬರು ನಿವೃತ್ತ ಅಧಿಕಾರಿಗಳೂ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದ್ದು, ಅವರಿಬ್ಬರನ್ನೂ ಬಂಧಿಸಿರುವ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಸೋವಿಯತ್ ಒಕ್ಕೂಟದಲ್ಲಿ ವಿನ್ಯಾಸಗೊಳಿಸಿರುವ ಕಿಲೋ ವರ್ಗದ ಜಲಾಂತರ್ಗಾಮಿ ನೌಕೆಗಳನ್ನು ಹಲವಾರು ದೇಶಗಳ ನೌಕಾಪಡೆಯಲ್ಲಿ ಸೇವೆಗೆ ಬಳಸಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಈ ಜಲಾಂತರ್ಗಾಮಿ ನೌಕೆಗಳನ್ನು ಸಿಂಧುಘೋಷ್ ವರ್ಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ಇಲ್ಲಿಯವರೆಗೆ ಸರ್ಕಾರವು ಇಂತಹ 10 ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸಿದೆ. ಈ ನೌಕೆಗಳನ್ನು ಇದೀಗ ನವೀಕರಿಸಲಾಗುತ್ತಿದ್ದು, ನವೀಕರಣದ ಮಾಹಿತಿಯನ್ನು ಈ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೌಕಾಪಡೆಯ ಒಬ್ಬರು ಹಾಲಿ ಅಧಿಕಾರಿ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳನ್ನು ಸಿಬಿಐ ಬಂಧಿಸಿ, ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ