AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್

CBI: ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
TV9 Web
| Edited By: |

Updated on: Mar 16, 2022 | 9:54 PM

Share

ನವದೆಹಲಿ: ಸುಮಾರು 1 ಲಕ್ಷ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ ಸಿಬಿಐ ಬಲೆ ಬೀಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯೂನಿವರ್ಸಿಟಿಯ ಪ್ರೊಫೆಸರ್ ಖಲೀದ್ ಮೊಯಿನ್​ ಮತ್ತು ಇನ್ನಿಬ್ಬರನ್ನು ಬುಧವಾರ ಬಂಧಿಸಿದೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ (Jamia Milia Islamia University) ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್​, ಅವರ ಇಬ್ಬರು ಸಹವರ್ತಿಗಳಾದ ಅಬೀದ್ ಖಾನ್ ಮತ್ತು ಪ್ರಖಾರ್ ಪವಾರ್ ಅವರುಗಳನ್ನು ದೆಹಲಿಯ ಓಕ್ಲಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಸಿಬಿಐ ಅಧಿಕಾರಿಗಳು (Central Bureau of Investigation -CBI) ಬಂಧಿಸಿದರು.

ಗುರುಗಾವ್​​ನಲ್ಲಿ ಚಿಂಟೆಲ್ಸ್ ಪರಡಿಸೊ ಅಪಾರ್ಟ್​​ಮೆಂಟ್ ಗೆ ಸುರಕ್ಷಾ ಪ್ರಮಾಣ ಪತ್ರವನ್ನು ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್ ಅವರು ವಿತರಿಸಿದ್ದರು. ಆದರೆ ಈ ಅಪಾರ್ಟ್​​ಮೆಂಟ್ ಇತ್ತೀಚೆಗೆ ಕುಸಿದುಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಆದರೆ ಅಪಾರ್ಟ್​​ಮೆಂಟ್ ಕುಸಿತಕ್ಕೂ ಪ್ರೊಫೆಸರ್ ಮೊಹಮದ್ ಬಂಧನಕ್ಕೂ ಸಂಬಂಧ ಇಲ್ಲ.

ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ಬಳಿಕ, ಆರೋಪಿಗಳ ವಾಸ ಸ್ಥಳಗಳ ಮೇಲೂ ಸಿಬಿಐ ದಾಳಿ ನಡೆಸಿದೆ. ಆ ವೇಳೆ, ಪ್ರೊಫೆಸರ್ ಮೊಹಮದ್ ಅವರಿಗೆ ಸೇರಿದ 30 ಲಕ್ಷ ರೂಪಾಯಿ ನಗದು ಮತ್ತು ಬ್ಯಾಂಕ್​ ಖಾತೆಯೊಂದರಲ್ಲಿ ಒಂದು ಕೋಟಿ 20 ಲಕ್ಷ ರೂಪಾಯಿ ಪತ್ತೆಯಾಗಿದೆ.

Also Read: ಮಂಗಳೂರು: ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಅಂತಾ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Also Read: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಆದಿತ್ಯರಾವ್​ಗೆ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ