AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್

CBI: ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
TV9 Web
| Edited By: ಸಾಧು ಶ್ರೀನಾಥ್​|

Updated on: Mar 16, 2022 | 9:54 PM

Share

ನವದೆಹಲಿ: ಸುಮಾರು 1 ಲಕ್ಷ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ ಸಿಬಿಐ ಬಲೆ ಬೀಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯೂನಿವರ್ಸಿಟಿಯ ಪ್ರೊಫೆಸರ್ ಖಲೀದ್ ಮೊಯಿನ್​ ಮತ್ತು ಇನ್ನಿಬ್ಬರನ್ನು ಬುಧವಾರ ಬಂಧಿಸಿದೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ (Jamia Milia Islamia University) ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್​, ಅವರ ಇಬ್ಬರು ಸಹವರ್ತಿಗಳಾದ ಅಬೀದ್ ಖಾನ್ ಮತ್ತು ಪ್ರಖಾರ್ ಪವಾರ್ ಅವರುಗಳನ್ನು ದೆಹಲಿಯ ಓಕ್ಲಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಸಿಬಿಐ ಅಧಿಕಾರಿಗಳು (Central Bureau of Investigation -CBI) ಬಂಧಿಸಿದರು.

ಗುರುಗಾವ್​​ನಲ್ಲಿ ಚಿಂಟೆಲ್ಸ್ ಪರಡಿಸೊ ಅಪಾರ್ಟ್​​ಮೆಂಟ್ ಗೆ ಸುರಕ್ಷಾ ಪ್ರಮಾಣ ಪತ್ರವನ್ನು ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್ ಅವರು ವಿತರಿಸಿದ್ದರು. ಆದರೆ ಈ ಅಪಾರ್ಟ್​​ಮೆಂಟ್ ಇತ್ತೀಚೆಗೆ ಕುಸಿದುಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಆದರೆ ಅಪಾರ್ಟ್​​ಮೆಂಟ್ ಕುಸಿತಕ್ಕೂ ಪ್ರೊಫೆಸರ್ ಮೊಹಮದ್ ಬಂಧನಕ್ಕೂ ಸಂಬಂಧ ಇಲ್ಲ.

ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ಬಳಿಕ, ಆರೋಪಿಗಳ ವಾಸ ಸ್ಥಳಗಳ ಮೇಲೂ ಸಿಬಿಐ ದಾಳಿ ನಡೆಸಿದೆ. ಆ ವೇಳೆ, ಪ್ರೊಫೆಸರ್ ಮೊಹಮದ್ ಅವರಿಗೆ ಸೇರಿದ 30 ಲಕ್ಷ ರೂಪಾಯಿ ನಗದು ಮತ್ತು ಬ್ಯಾಂಕ್​ ಖಾತೆಯೊಂದರಲ್ಲಿ ಒಂದು ಕೋಟಿ 20 ಲಕ್ಷ ರೂಪಾಯಿ ಪತ್ತೆಯಾಗಿದೆ.

Also Read: ಮಂಗಳೂರು: ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಅಂತಾ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Also Read: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಆದಿತ್ಯರಾವ್​ಗೆ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​