AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್

CBI: ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ನಕಲಿ ಪ್ರಮಾಣ ಪತ್ರಕ್ಕೆ ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
ಲಂಚ: ಜಾಮಿಯಾ ಮಿಲಿಯಾ ಪ್ರೊಫೆಸರ್ ಖಲೀದ್ ಮೊಯಿನ್​ ಅಂದರ್
TV9 Web
| Updated By: ಸಾಧು ಶ್ರೀನಾಥ್​|

Updated on: Mar 16, 2022 | 9:54 PM

Share

ನವದೆಹಲಿ: ಸುಮಾರು 1 ಲಕ್ಷ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ ಸಿಬಿಐ ಬಲೆ ಬೀಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯೂನಿವರ್ಸಿಟಿಯ ಪ್ರೊಫೆಸರ್ ಖಲೀದ್ ಮೊಯಿನ್​ ಮತ್ತು ಇನ್ನಿಬ್ಬರನ್ನು ಬುಧವಾರ ಬಂಧಿಸಿದೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ (Jamia Milia Islamia University) ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್​, ಅವರ ಇಬ್ಬರು ಸಹವರ್ತಿಗಳಾದ ಅಬೀದ್ ಖಾನ್ ಮತ್ತು ಪ್ರಖಾರ್ ಪವಾರ್ ಅವರುಗಳನ್ನು ದೆಹಲಿಯ ಓಕ್ಲಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಸಿಬಿಐ ಅಧಿಕಾರಿಗಳು (Central Bureau of Investigation -CBI) ಬಂಧಿಸಿದರು.

ಗುರುಗಾವ್​​ನಲ್ಲಿ ಚಿಂಟೆಲ್ಸ್ ಪರಡಿಸೊ ಅಪಾರ್ಟ್​​ಮೆಂಟ್ ಗೆ ಸುರಕ್ಷಾ ಪ್ರಮಾಣ ಪತ್ರವನ್ನು ಪ್ರೊಫೆಸರ್ ಮೊಹಮದ್ ಖಲೀದ್ ಮೊಯಿನ್ ಅವರು ವಿತರಿಸಿದ್ದರು. ಆದರೆ ಈ ಅಪಾರ್ಟ್​​ಮೆಂಟ್ ಇತ್ತೀಚೆಗೆ ಕುಸಿದುಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಆದರೆ ಅಪಾರ್ಟ್​​ಮೆಂಟ್ ಕುಸಿತಕ್ಕೂ ಪ್ರೊಫೆಸರ್ ಮೊಹಮದ್ ಬಂಧನಕ್ಕೂ ಸಂಬಂಧ ಇಲ್ಲ.

ಅನೇಕ ಖಾಸಗಿ ಬಿಲ್ಡರ್​​ಗಳು, ಆರ್ಕಿಟೆಕ್ಟ್​​ಗಳು, ಮಧ್ಯವರ್ತಿಗಳು ಮುಂತಾದವರೊಂದಿಗೆ ಶಾಮೀಲಾಗಿ ಲಂಚ ಪಡೆದು, ಕಟ್ಟಡಗಳ ಬಾಳಿಕೆ ಬಗ್ಗೆ ನಕಲಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣವೊಂದರಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುವಾಗ ಬಲೆ ಬೀಸಿದ ಸಿಬಿಐ ಮೂವರನ್ನೂ ಬಂಧಿಸಿದೆ.

ಬಳಿಕ, ಆರೋಪಿಗಳ ವಾಸ ಸ್ಥಳಗಳ ಮೇಲೂ ಸಿಬಿಐ ದಾಳಿ ನಡೆಸಿದೆ. ಆ ವೇಳೆ, ಪ್ರೊಫೆಸರ್ ಮೊಹಮದ್ ಅವರಿಗೆ ಸೇರಿದ 30 ಲಕ್ಷ ರೂಪಾಯಿ ನಗದು ಮತ್ತು ಬ್ಯಾಂಕ್​ ಖಾತೆಯೊಂದರಲ್ಲಿ ಒಂದು ಕೋಟಿ 20 ಲಕ್ಷ ರೂಪಾಯಿ ಪತ್ತೆಯಾಗಿದೆ.

Also Read: ಮಂಗಳೂರು: ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಅಂತಾ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Also Read: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಆದಿತ್ಯರಾವ್​ಗೆ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ