AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖವೇ ಗೊತ್ತಿಲ್ಲದ ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

Chitra Ramkrishna: 2013ಎಲ್ಲಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ಚಿತ್ರಾ ರಾಮಕೃಷ್ಣ 2014ರಿಂದ 2016ರವರೆಗೆ ಎನ್​ಎಸ್​ಇಯ ಅನೇಕ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಹಂಚಿಕೊಂಡಿದ್ದಾರೆ ಎಂದು ಸೆಬಿ ಹೇಳಿತ್ತು.

ಮುಖವೇ ಗೊತ್ತಿಲ್ಲದ ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ
ಚಿತ್ರಾ ರಾಮಕೃಷ್ಣ
TV9 Web
| Edited By: |

Updated on:Mar 07, 2022 | 9:50 AM

Share

ನ್ಯಾಶನಲ್​ ಸ್ಟಾಕ್​ ಎಕ್ಸ್​​ಚೇಂಜ್​  (NSE)ಮಾಜಿ ಸಿಇಒ ಚಿತ್ರಾ ರಾಮಕೃಷ್ಣ (Chitra Ramkrishna) ಭಾನುವಾರ ಸಿಬಿಐ (ಕೇಂದ್ರೀಯ ತನಿಖಾ ದಳ) ಬಂಧಿಸಿದೆ. ಚಿತ್ರಾ ರಾಮಕೃಷ್ಣರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದ ಬಳಿಕ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಫೆ.25ರಂದು ಮಾಜಿ ಸಿಇಒ ಆನಂದ್​ ಸುಬ್ರಹ್ಮಣಿಯನ್​ರನ್ನು ಸಿಬಿಐ ಬಂಧನ ಮಾಡಿತ್ತು. ಇದೊಂದು ವಿಚಿತ್ರ ಪ್ರಕರಣ. 2013ರಿಂದ 2016ರವರೆಗೆ ಎನ್​ಎಸ್​ಇ ಸಿಇಒ ಮತ್ತು ಮ್ಯಾನೇಜಿಂಗ್​ ಡೈರೆಕ್ಟರ್​ ಆಗಿದ್ದ ಚಿತ್ರಾ, ಹಿಮಾಲಯದಲ್ಲಿರುವ ಒಬ್ಬ ಯೋಗಿಯವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎನ್​ಎಸ್​ಇಗೆ ಸಂಬಂಧಿಸಿದ ಹಲವು ಗೌಪ್ಯ ವಿಚಾರಗಳನ್ನು ಅವರೊಂದಿಗೆ ಹಂಚಿಕೊಂಡಿದ್ದರು. ಆದರೆ ಆ ಯೋಗಿ ಯಾರು, ಅವರ ಮುಖ ಹೇಗಿದೆ ಎಂಬುದು ಸ್ವತಃ ಚಿತ್ರಾರಿಗೂ ಗೊತ್ತಿರಲಿಲ್ಲ.  ಆ ಅಪರಿಚಿತ ಯೋಗಿ ಆದೇಶದ ಮೇರೆಗೇ ಆನಂದ್​ರನ್ನು ಚಿತ್ರಾ ಎನ್​ಎಸ್​ಇಗೆ ನೇಮಕ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು. ಆದರೆ ಆ ಯೋಗಿ ಬೇರೆ ಯಾರೂ ಅಲ್ಲ, ಆನಂದ್​ ಸುಬ್ರಹ್ಮಣಿಯನ್​ ಅವರೇ ಯೋಗಿಯಂತೆ ನಟಿಸಿದ್ದರು ಎಂಬುದು ಸಿಬಿಐ ಅನುಮಾನ.

ಈ ಪ್ರಕರಣ ಬೆಳಕಿಗೆ ಬಂದಿದ್ದು 2022ರ ಫೆಬ್ರವರಿಯಲ್ಲಿ. ಮಾರುಕಟ್ಟೆ ನಿಯಂತ್ರಕವಾದ ಸೆಕ್ಯೂರಿಟಿಸ್​ ಆ್ಯಂಡ್ ಎಕ್ಸ್​ಚೇಂಜ್​ ಬೋರ್ಡ್​ ಆಫ್​ ಇಂಡಿಯಾ (ಸೆಬಿ-SEBI) ತನಿಖೆಯಲ್ಲಿ ಗೊತ್ತಾಗಿದೆ. ಅತಿದೊಡ್ಡ ಷೇರು ವಿನಿಮಯ ಕೇಂದ್ರವಾದ ಎನ್​ಎಸ್​ಇಯಲ್ಲಿ 2010ರಿಂದ 2015ರ ಅವಧಿಯಲ್ಲಿ  ಹಲವು ಅಕ್ರಮ, ಅನ್ಯಾಯಗಳು ನಡೆದಿವೆ. 2013ಎಲ್ಲಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ಚಿತ್ರಾ ರಾಮಕೃಷ್ಣ 2014ರಿಂದ 2016ರವರೆಗೆ ಎನ್​ಎಸ್​ಇಯ ಅನೇಕ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಇ-ಮೇಲ್​ ಮೂಲಕ ಸಂವಹನ ನಡೆಸುತ್ತಿದ್ದುದಕ್ಕೆ ದಾಖಲೆಗಳ ಪುರಾವೆ ಇದೆ ಎಂದೂ ಸೆಬಿ ಹೇಳಿತ್ತು. ಅದರ ಬೆನ್ನಲ್ಲೇ ಚಿತ್ರಾರ ಮುಂಬೈ ಮನೆ ಮೇಲೆ ಆದಾಯ ತೆರಿಗೆ ದಾಳಿಯೂ ಆಗಿತ್ತು.

ಅಂದಹಾಗೇ ಚಿತ್ರಾ ವಿರುದ್ಧ ಸಿಬಿಐ ತನಿಖೆ ಕೈಗೊಂಡಿದ್ದು ಅವರ ಆಡಳಿತ ಅವಧಿಯಲ್ಲಿ ನಡೆದ ಕೋ ಲೊಕೇಶನ್​ ಎಂಬ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟು. ಎನ್‌ಎಸ್‌ಇಯ ಹೈ-ಸ್ಪೀಡ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಅಥವಾ ಆಲ್ಗೋ ಟ್ರೇಡಿಂಗ್ ಮತ್ತು ಕೋ-ಲೊಕೇಶನ್ ಪ್ಲಾಟ್‌ಫಾರ್ಮ್ ಅನ್ನು ಸಂಪರ್ಕಿಸಿ, ಕೆಲವು ದಲ್ಲಾಳಿಗಳು ಅನ್ಯಾಯದ ಮಾರ್ಗದಲ್ಲಿ ಬೇರೆಯವರಿಗಿಂದ ಹೆಚ್ಚಿನ ಲಾಭವನ್ನು ಗಳಿಸಿದ ಕೋ-ಲೊಕೇಶನ್ ಹಗರಣದ ತನಿಖೆಯನ್ನು ಸಿಬಿಐ 2017ರಲ್ಲೇ ಕೈಗೆತ್ತಿಕೊಂಡಿದ್ದು, 2018ರಲ್ಲಿ ಎಫ್​ಐಆರ್ ದಾಖಲು ಮಾಡಿತ್ತು. ಅಷ್ಟೇ ಅಲ್ಲ, ಚಿತ್ರಾ ವಿರುದ್ಧ ಲುಕೌಟ್ ನೋಟಿಸ್​ ಕೂಡ ಜಾರಿ ಮಾಡಿತ್ತು.

ಇದನ್ನೂ ಓದಿ: Chitra Ramakrishna: ಅಪರಿಚಿತ ಯೋಗಿ ಇಶಾರೆಯಂತೆ 3 ವರ್ಷ ಎನ್​ಎಸ್​ಇ ಮುನ್ನಡೆಸಿದ ಮಾಜಿ ಸಿಇಒ ಚಿತ್ರಾ ವಿಚಿತ್ರ ಸ್ಟೋರಿ

Published On - 8:13 am, Mon, 7 March 22

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ