Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖವೇ ಗೊತ್ತಿಲ್ಲದ ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

Chitra Ramkrishna: 2013ಎಲ್ಲಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ಚಿತ್ರಾ ರಾಮಕೃಷ್ಣ 2014ರಿಂದ 2016ರವರೆಗೆ ಎನ್​ಎಸ್​ಇಯ ಅನೇಕ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಹಂಚಿಕೊಂಡಿದ್ದಾರೆ ಎಂದು ಸೆಬಿ ಹೇಳಿತ್ತು.

ಮುಖವೇ ಗೊತ್ತಿಲ್ಲದ ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ
ಚಿತ್ರಾ ರಾಮಕೃಷ್ಣ
Follow us
TV9 Web
| Updated By: Digi Tech Desk

Updated on:Mar 07, 2022 | 9:50 AM

ನ್ಯಾಶನಲ್​ ಸ್ಟಾಕ್​ ಎಕ್ಸ್​​ಚೇಂಜ್​  (NSE)ಮಾಜಿ ಸಿಇಒ ಚಿತ್ರಾ ರಾಮಕೃಷ್ಣ (Chitra Ramkrishna) ಭಾನುವಾರ ಸಿಬಿಐ (ಕೇಂದ್ರೀಯ ತನಿಖಾ ದಳ) ಬಂಧಿಸಿದೆ. ಚಿತ್ರಾ ರಾಮಕೃಷ್ಣರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದ ಬಳಿಕ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಫೆ.25ರಂದು ಮಾಜಿ ಸಿಇಒ ಆನಂದ್​ ಸುಬ್ರಹ್ಮಣಿಯನ್​ರನ್ನು ಸಿಬಿಐ ಬಂಧನ ಮಾಡಿತ್ತು. ಇದೊಂದು ವಿಚಿತ್ರ ಪ್ರಕರಣ. 2013ರಿಂದ 2016ರವರೆಗೆ ಎನ್​ಎಸ್​ಇ ಸಿಇಒ ಮತ್ತು ಮ್ಯಾನೇಜಿಂಗ್​ ಡೈರೆಕ್ಟರ್​ ಆಗಿದ್ದ ಚಿತ್ರಾ, ಹಿಮಾಲಯದಲ್ಲಿರುವ ಒಬ್ಬ ಯೋಗಿಯವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎನ್​ಎಸ್​ಇಗೆ ಸಂಬಂಧಿಸಿದ ಹಲವು ಗೌಪ್ಯ ವಿಚಾರಗಳನ್ನು ಅವರೊಂದಿಗೆ ಹಂಚಿಕೊಂಡಿದ್ದರು. ಆದರೆ ಆ ಯೋಗಿ ಯಾರು, ಅವರ ಮುಖ ಹೇಗಿದೆ ಎಂಬುದು ಸ್ವತಃ ಚಿತ್ರಾರಿಗೂ ಗೊತ್ತಿರಲಿಲ್ಲ.  ಆ ಅಪರಿಚಿತ ಯೋಗಿ ಆದೇಶದ ಮೇರೆಗೇ ಆನಂದ್​ರನ್ನು ಚಿತ್ರಾ ಎನ್​ಎಸ್​ಇಗೆ ನೇಮಕ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು. ಆದರೆ ಆ ಯೋಗಿ ಬೇರೆ ಯಾರೂ ಅಲ್ಲ, ಆನಂದ್​ ಸುಬ್ರಹ್ಮಣಿಯನ್​ ಅವರೇ ಯೋಗಿಯಂತೆ ನಟಿಸಿದ್ದರು ಎಂಬುದು ಸಿಬಿಐ ಅನುಮಾನ.

ಈ ಪ್ರಕರಣ ಬೆಳಕಿಗೆ ಬಂದಿದ್ದು 2022ರ ಫೆಬ್ರವರಿಯಲ್ಲಿ. ಮಾರುಕಟ್ಟೆ ನಿಯಂತ್ರಕವಾದ ಸೆಕ್ಯೂರಿಟಿಸ್​ ಆ್ಯಂಡ್ ಎಕ್ಸ್​ಚೇಂಜ್​ ಬೋರ್ಡ್​ ಆಫ್​ ಇಂಡಿಯಾ (ಸೆಬಿ-SEBI) ತನಿಖೆಯಲ್ಲಿ ಗೊತ್ತಾಗಿದೆ. ಅತಿದೊಡ್ಡ ಷೇರು ವಿನಿಮಯ ಕೇಂದ್ರವಾದ ಎನ್​ಎಸ್​ಇಯಲ್ಲಿ 2010ರಿಂದ 2015ರ ಅವಧಿಯಲ್ಲಿ  ಹಲವು ಅಕ್ರಮ, ಅನ್ಯಾಯಗಳು ನಡೆದಿವೆ. 2013ಎಲ್ಲಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ಚಿತ್ರಾ ರಾಮಕೃಷ್ಣ 2014ರಿಂದ 2016ರವರೆಗೆ ಎನ್​ಎಸ್​ಇಯ ಅನೇಕ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಇ-ಮೇಲ್​ ಮೂಲಕ ಸಂವಹನ ನಡೆಸುತ್ತಿದ್ದುದಕ್ಕೆ ದಾಖಲೆಗಳ ಪುರಾವೆ ಇದೆ ಎಂದೂ ಸೆಬಿ ಹೇಳಿತ್ತು. ಅದರ ಬೆನ್ನಲ್ಲೇ ಚಿತ್ರಾರ ಮುಂಬೈ ಮನೆ ಮೇಲೆ ಆದಾಯ ತೆರಿಗೆ ದಾಳಿಯೂ ಆಗಿತ್ತು.

ಅಂದಹಾಗೇ ಚಿತ್ರಾ ವಿರುದ್ಧ ಸಿಬಿಐ ತನಿಖೆ ಕೈಗೊಂಡಿದ್ದು ಅವರ ಆಡಳಿತ ಅವಧಿಯಲ್ಲಿ ನಡೆದ ಕೋ ಲೊಕೇಶನ್​ ಎಂಬ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟು. ಎನ್‌ಎಸ್‌ಇಯ ಹೈ-ಸ್ಪೀಡ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಅಥವಾ ಆಲ್ಗೋ ಟ್ರೇಡಿಂಗ್ ಮತ್ತು ಕೋ-ಲೊಕೇಶನ್ ಪ್ಲಾಟ್‌ಫಾರ್ಮ್ ಅನ್ನು ಸಂಪರ್ಕಿಸಿ, ಕೆಲವು ದಲ್ಲಾಳಿಗಳು ಅನ್ಯಾಯದ ಮಾರ್ಗದಲ್ಲಿ ಬೇರೆಯವರಿಗಿಂದ ಹೆಚ್ಚಿನ ಲಾಭವನ್ನು ಗಳಿಸಿದ ಕೋ-ಲೊಕೇಶನ್ ಹಗರಣದ ತನಿಖೆಯನ್ನು ಸಿಬಿಐ 2017ರಲ್ಲೇ ಕೈಗೆತ್ತಿಕೊಂಡಿದ್ದು, 2018ರಲ್ಲಿ ಎಫ್​ಐಆರ್ ದಾಖಲು ಮಾಡಿತ್ತು. ಅಷ್ಟೇ ಅಲ್ಲ, ಚಿತ್ರಾ ವಿರುದ್ಧ ಲುಕೌಟ್ ನೋಟಿಸ್​ ಕೂಡ ಜಾರಿ ಮಾಡಿತ್ತು.

ಇದನ್ನೂ ಓದಿ: Chitra Ramakrishna: ಅಪರಿಚಿತ ಯೋಗಿ ಇಶಾರೆಯಂತೆ 3 ವರ್ಷ ಎನ್​ಎಸ್​ಇ ಮುನ್ನಡೆಸಿದ ಮಾಜಿ ಸಿಇಒ ಚಿತ್ರಾ ವಿಚಿತ್ರ ಸ್ಟೋರಿ

Published On - 8:13 am, Mon, 7 March 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್