AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಹಾಗೇ ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 14, 2021 | 7:18 PM

Share

ದೆಹಲಿ: ಕೆಲವು ಸಿಬಿಐ ಅಧಿಕಾರಿಗಳ ವಿರುದ್ಧ ಸ್ವತಃ ಸಿಬಿಐ ಪ್ರಕರಣ ದಾಖಲಿಸಿ, ಆ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿದ ಅಪರೂಪದ ಘಟನೆ ನಡೆದಿದೆ. ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದ್ದು, ಅದರಲ್ಲೂ ನಾಲ್ವರು ಸಿಬಿಐ ಅಧಿಕಾರಿಗಳ ಮೇಲೆ ಸಿಬಿಐ ತೀವ್ರ ನಿಗಾವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕ್​ಗೆ ವಂಚಿಸಿದ ಕಂಪನಿಯೊಂದರ ಬಳಿ ಲಂಚ ಪಡೆದು, ಆ ಕಂಪನಿಯ ಪರವಾಗಿ ಕೆಲಸ ಮಾಡಿದ್ದಲ್ಲದೆ, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ವಂಚಿಸಿದ್ದ ಕಂಪನಿಯ ಪರವಾಗಿಯೇ ಕೆಲಸ ಮಾಡಿದ ಆರೋಪವನ್ನು ದಾಳಿಗೊಳಗಾದ ಅಧಿಕಾರಿಗಳು ಎದುರಿಸುತ್ತಿದ್ದಾರೆ. ಸದ್ಯ ಸಿಬಿಐ ಅಧಿಕಾರಿಗಳು ದೆಹಲಿ, ನೊಯ್ಡಾ, ಘಾಜಿಯಾಬಾದ್​, ಗುರುಗ್ರಾಮ​, ಕಾನ್ಪುರ ಮತ್ತು ಮೀರತ್​ ಸೇರಿ ಒಟ್ಟು 14 ಪ್ರದೇಶಗಳಲ್ಲಿ ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳಿಗಾಗಿ ಹುಡುಕಿದ್ದಾರೆ. ಇನ್ನು ಘಾಜಿಯಾಬಾದ್​ ಸಿಬಿಐ ಅಧಿಕಾರಿಯೊಬ್ಬರ ವಿಚಾರಣೆಯನ್ನೂ ಮಾಡಲಾಗಿದೆ. ಈ ಅಧಿಕಾರಿ ಸದ್ಯ ಸಿಬಿಐ ಅಕಾಡೆಮಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ. ಇನ್ನು ಕೆಲವು ಸಿಬಿಐ ಅಧಿಕಾರಿಗಳೂ ಪೂರ್ತಿ ಭ್ರಷ್ಟರಾಗಿದ್ದಾರೆ. ಬ್ಯಾಂಕ್​ಗಳಿಂದ ಸಾಲ ಪಡೆದು ವಂಚನೆ ಮಾಡುತ್ತಿರುವ ಕಂಪನಿಗಳಿಂದ ನಿರಂತರವಾಗಿ ಇಂತಿಷ್ಟು ಎಂದು ಹಣ ಪಡೆಯುತ್ತಾ, ಆ ಕಂಪನಿಗಳನ್ನು ರಕ್ಷಿಸುತ್ತವೆ ಎಂದು ಸಿಬಿಐ ಮೂಲಗಳೇ ತಿಳಿಸಿವೆ.

‘53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್