AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಹಾಗೇ ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 14, 2021 | 7:18 PM

Share

ದೆಹಲಿ: ಕೆಲವು ಸಿಬಿಐ ಅಧಿಕಾರಿಗಳ ವಿರುದ್ಧ ಸ್ವತಃ ಸಿಬಿಐ ಪ್ರಕರಣ ದಾಖಲಿಸಿ, ಆ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿದ ಅಪರೂಪದ ಘಟನೆ ನಡೆದಿದೆ. ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದ್ದು, ಅದರಲ್ಲೂ ನಾಲ್ವರು ಸಿಬಿಐ ಅಧಿಕಾರಿಗಳ ಮೇಲೆ ಸಿಬಿಐ ತೀವ್ರ ನಿಗಾವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕ್​ಗೆ ವಂಚಿಸಿದ ಕಂಪನಿಯೊಂದರ ಬಳಿ ಲಂಚ ಪಡೆದು, ಆ ಕಂಪನಿಯ ಪರವಾಗಿ ಕೆಲಸ ಮಾಡಿದ್ದಲ್ಲದೆ, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ವಂಚಿಸಿದ್ದ ಕಂಪನಿಯ ಪರವಾಗಿಯೇ ಕೆಲಸ ಮಾಡಿದ ಆರೋಪವನ್ನು ದಾಳಿಗೊಳಗಾದ ಅಧಿಕಾರಿಗಳು ಎದುರಿಸುತ್ತಿದ್ದಾರೆ. ಸದ್ಯ ಸಿಬಿಐ ಅಧಿಕಾರಿಗಳು ದೆಹಲಿ, ನೊಯ್ಡಾ, ಘಾಜಿಯಾಬಾದ್​, ಗುರುಗ್ರಾಮ​, ಕಾನ್ಪುರ ಮತ್ತು ಮೀರತ್​ ಸೇರಿ ಒಟ್ಟು 14 ಪ್ರದೇಶಗಳಲ್ಲಿ ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳಿಗಾಗಿ ಹುಡುಕಿದ್ದಾರೆ. ಇನ್ನು ಘಾಜಿಯಾಬಾದ್​ ಸಿಬಿಐ ಅಧಿಕಾರಿಯೊಬ್ಬರ ವಿಚಾರಣೆಯನ್ನೂ ಮಾಡಲಾಗಿದೆ. ಈ ಅಧಿಕಾರಿ ಸದ್ಯ ಸಿಬಿಐ ಅಕಾಡೆಮಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ. ಇನ್ನು ಕೆಲವು ಸಿಬಿಐ ಅಧಿಕಾರಿಗಳೂ ಪೂರ್ತಿ ಭ್ರಷ್ಟರಾಗಿದ್ದಾರೆ. ಬ್ಯಾಂಕ್​ಗಳಿಂದ ಸಾಲ ಪಡೆದು ವಂಚನೆ ಮಾಡುತ್ತಿರುವ ಕಂಪನಿಗಳಿಂದ ನಿರಂತರವಾಗಿ ಇಂತಿಷ್ಟು ಎಂದು ಹಣ ಪಡೆಯುತ್ತಾ, ಆ ಕಂಪನಿಗಳನ್ನು ರಕ್ಷಿಸುತ್ತವೆ ಎಂದು ಸಿಬಿಐ ಮೂಲಗಳೇ ತಿಳಿಸಿವೆ.

‘53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?