AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದ ಸಿಬಿಐ

ಮಹಾಂತ ನರೇಂದ್ರ ಗಿರಿಯವರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿತ್ತು. ಅದರಲ್ಲಿ ಕೆಲವು ಜನರ ಹೆಸರನ್ನು ನಮೂದಿಸಿ, ಇವರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದ ಸಿಬಿಐ
ಮಹಾಂತ ನರೇಂದ್ರ ಗಿರಿ ಸ್ವಾಮೀಜಿ
Follow us
TV9 Web
| Updated By: Lakshmi Hegde

Updated on: Nov 20, 2021 | 7:36 PM

ಅಖಿಲ ಭಾರತೀಯ ಆಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಸಾವಿನ ಪ್ರಕರಣಕ್ಕೆ (Narendra Giri Death Case) ಸಂಬಂಧಪಟ್ಟಂತೆ ಸಿಬಿಐ ಇಂದು ಅವರ ಶಿಷ್ಯಂದಿರಾದ ಆನಂದ್​ ತಿವಾರಿ, ಸಂದೀಪ್​ ತಿವಾರಿ ಮತ್ತು ಆತನ ಪುತ್ರ ಆಧ್ಯ ತಿವಾರಿ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಈ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.  ಪ್ರಯಾಗ್​ರಾಜ್​​ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಕೋರ್ಟ್​​ನಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಸ್ತುತ ಚಾರ್ಜ್​ಶೀಟ್​​ನ್ನು ಪರಿಗಣಿಸಿರುವ ನ್ಯಾಯಾಲಯ ನವೆಂಬರ್​ 25ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯದಲ್ಲಿ ಮೂವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಆರೋಪಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 25 ಕ್ಕೆ ನಿಗದಿಪಡಿಸಿದೆ. ಅಲ್ಲಿಯವರೆಗೂ ಮೂವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ಏನಿದು ಪ್ರಕರಣ? ಮಹಾಂತ ನರೇಂದ್ರ ಗಿರಿ ಅವರು ಸೆಪ್ಟೆಂಬರ್​ 20ರಂದು ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನ ಆಶ್ರಮದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದಕ್ಕೂ ಮೊದಲು ಅವರು ಬರೆದ ಸೂಸೈಡ್​ ನೋಟ್​ ಪತ್ತೆಯಾಗಿತ್ತು.  ಅಂದು ಮಧ್ಯಾಹ್ನ ಊಟ ಮಾಡಿದ ಮಹಾಂತ ನರೇಂದ್ರ ಗಿರಿ (72) ತಮ್ಮ ಕೋಣೆ ಸೇರಿಕೊಂಡಿದ್ದರು. ಸಂಜೆಯಾದರೂ ಹೊರ ಬಾರದೆ ಇದ್ದಾಗ ಅವರ ಶಿಷ್ಯಂದಿರು ಹೋಗಿ ಬಾಗಿಲು ಬಡಿದು, ಕರೆದಿದ್ದರು. ಆದರೆ ಎಷ್ಟೇ ಹೊತ್ತಾದರೂ ಅವರಿಂದ ಉತ್ತರ ಬರದೆ ಇದ್ದಾಗ ಶಿಷ್ಯಂದಿರು ಬಾಗಿಲು ಮುರಿದು ಒಳಗೆ ಹೋಗಿದ್ದರು. ಆಗ ನರೇಂದ್ರ ಗಿರಿಯವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು.

ದೇಶದ ಸಾಧು-ಸಂತರ ಅತ್ಯಂತ ದೊಡ್ಡ ಸಂಘಟನೆಯಾದ ಅಖಿಲ ಭಾರತೀಯ ಆಖಾಡ ಪರಿಷತ್​ ಅಧ್ಯಕ್ಷ ಮಹಾಂತ ನರೇಂದ್ರ ಗಿರಿಯವರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿತ್ತು. ಅದರಲ್ಲಿ ಕೆಲವು ಜನರ ಹೆಸರನ್ನು ನಮೂದಿಸಿ, ಇವರಿಂದ ತೀವ್ರ ತೊಂದರೆಯಾಗುತ್ತಿದೆ. ನನ್ನನ್ನು ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದಾರೆ. ನನಗೆ ಸಾರ್ವಜನಿಕವಾಗಿ ಅವಮಾನ ಸಹಿಸಿ ಬದುಕುವ ಶಕ್ತಿ ಇಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿತ್ತು. ಈ ಆತ್ಮಹತ್ಯೆ ನೋಟ್ ಆಧಾರದ ಮೇಲೆ ಆನಂದ್​ ತಿವಾರಿ, ಸಂದೀಪ್​ ತಿವಾರಿ ಮತ್ತು ಆಧ್ಯ ತಿವಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅದಾದ ಬಳಿಕ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಮಹಾಂತ ನರೇಂದ್ರ ಗಿರಿ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ