AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದ ಸಿಬಿಐ

ಮಹಾಂತ ನರೇಂದ್ರ ಗಿರಿಯವರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿತ್ತು. ಅದರಲ್ಲಿ ಕೆಲವು ಜನರ ಹೆಸರನ್ನು ನಮೂದಿಸಿ, ಇವರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದ ಸಿಬಿಐ
ಮಹಾಂತ ನರೇಂದ್ರ ಗಿರಿ ಸ್ವಾಮೀಜಿ
TV9 Web
| Edited By: |

Updated on: Nov 20, 2021 | 7:36 PM

Share

ಅಖಿಲ ಭಾರತೀಯ ಆಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಸಾವಿನ ಪ್ರಕರಣಕ್ಕೆ (Narendra Giri Death Case) ಸಂಬಂಧಪಟ್ಟಂತೆ ಸಿಬಿಐ ಇಂದು ಅವರ ಶಿಷ್ಯಂದಿರಾದ ಆನಂದ್​ ತಿವಾರಿ, ಸಂದೀಪ್​ ತಿವಾರಿ ಮತ್ತು ಆತನ ಪುತ್ರ ಆಧ್ಯ ತಿವಾರಿ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಈ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.  ಪ್ರಯಾಗ್​ರಾಜ್​​ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಕೋರ್ಟ್​​ನಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಸ್ತುತ ಚಾರ್ಜ್​ಶೀಟ್​​ನ್ನು ಪರಿಗಣಿಸಿರುವ ನ್ಯಾಯಾಲಯ ನವೆಂಬರ್​ 25ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯದಲ್ಲಿ ಮೂವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಆರೋಪಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 25 ಕ್ಕೆ ನಿಗದಿಪಡಿಸಿದೆ. ಅಲ್ಲಿಯವರೆಗೂ ಮೂವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ಏನಿದು ಪ್ರಕರಣ? ಮಹಾಂತ ನರೇಂದ್ರ ಗಿರಿ ಅವರು ಸೆಪ್ಟೆಂಬರ್​ 20ರಂದು ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನ ಆಶ್ರಮದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದಕ್ಕೂ ಮೊದಲು ಅವರು ಬರೆದ ಸೂಸೈಡ್​ ನೋಟ್​ ಪತ್ತೆಯಾಗಿತ್ತು.  ಅಂದು ಮಧ್ಯಾಹ್ನ ಊಟ ಮಾಡಿದ ಮಹಾಂತ ನರೇಂದ್ರ ಗಿರಿ (72) ತಮ್ಮ ಕೋಣೆ ಸೇರಿಕೊಂಡಿದ್ದರು. ಸಂಜೆಯಾದರೂ ಹೊರ ಬಾರದೆ ಇದ್ದಾಗ ಅವರ ಶಿಷ್ಯಂದಿರು ಹೋಗಿ ಬಾಗಿಲು ಬಡಿದು, ಕರೆದಿದ್ದರು. ಆದರೆ ಎಷ್ಟೇ ಹೊತ್ತಾದರೂ ಅವರಿಂದ ಉತ್ತರ ಬರದೆ ಇದ್ದಾಗ ಶಿಷ್ಯಂದಿರು ಬಾಗಿಲು ಮುರಿದು ಒಳಗೆ ಹೋಗಿದ್ದರು. ಆಗ ನರೇಂದ್ರ ಗಿರಿಯವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು.

ದೇಶದ ಸಾಧು-ಸಂತರ ಅತ್ಯಂತ ದೊಡ್ಡ ಸಂಘಟನೆಯಾದ ಅಖಿಲ ಭಾರತೀಯ ಆಖಾಡ ಪರಿಷತ್​ ಅಧ್ಯಕ್ಷ ಮಹಾಂತ ನರೇಂದ್ರ ಗಿರಿಯವರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿತ್ತು. ಅದರಲ್ಲಿ ಕೆಲವು ಜನರ ಹೆಸರನ್ನು ನಮೂದಿಸಿ, ಇವರಿಂದ ತೀವ್ರ ತೊಂದರೆಯಾಗುತ್ತಿದೆ. ನನ್ನನ್ನು ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದಾರೆ. ನನಗೆ ಸಾರ್ವಜನಿಕವಾಗಿ ಅವಮಾನ ಸಹಿಸಿ ಬದುಕುವ ಶಕ್ತಿ ಇಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿತ್ತು. ಈ ಆತ್ಮಹತ್ಯೆ ನೋಟ್ ಆಧಾರದ ಮೇಲೆ ಆನಂದ್​ ತಿವಾರಿ, ಸಂದೀಪ್​ ತಿವಾರಿ ಮತ್ತು ಆಧ್ಯ ತಿವಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅದಾದ ಬಳಿಕ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಮಹಾಂತ ನರೇಂದ್ರ ಗಿರಿ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?