AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ

ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ
ಟಿಎಂಸಿ ನಾಯಕನ ಮನೆಗೆ ಭೇಟಿ ಕೊಟ್ಟ ಸಿಬಿಐ ತಂಡ
TV9 Web
| Updated By: Lakshmi Hegde|

Updated on:Apr 16, 2022 | 9:43 AM

Share

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್​ಖಾಲಿಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಕೈಗೆತ್ತಿಕೊಂಡಿದ್ದು, ಡಿಎನ್​ಎ ಟೆಸ್ಟ್​ ನಡೆಸಲು ಯೋಜನೆ ರೂಪಿಸುತ್ತಿದೆ. ಅಪರಾಧ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಾದರಿಗಳು, ಬಂಧಿತರಾದ ಆರೋಪಿಗಳೊಂದಿಗೆ ಹೊಂದಿಕೆಯಾಗುತ್ತದೆಯೇ ಎಂಬುದನ್ನು ಪರಿಶೀಲಿಸಲು ಮುಂದಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.  ಈ ಪ್ರಕರಣಕ್ಕೆ ಸಂಬಂಧಪಟ್ಟು ಸ್ಥಳೀಯ ಟಿಎಂಸಿ ಮುಖಂಡನೊಬ್ಬನ ಪುತ್ರ ಮತ್ತು ಇನ್ನೊಬ್ಬನನ್ನು ಈಗಾಗಲೇ ಬಂಧಿಸಲಾಗಿದ್ದು, ಡಿಎನ್​ಎ ಟೆಸ್ಟ್ ಮಾಡಿಸಲು ಯೋಜನೆ ರೂಪಿಸಿರುವ ಸಿಬಿಐ ಈಗಾಗಲೇ ಟಿಎಂಸಿ ನಾಯಕನ ಮನೆಗೆ ಭೇಟಿ ನೀಡಿ, ಟೆಸ್ಟ್​ಗೆ ಬೇಕಾದ ಅಂಶಗಳನ್ನು ಸಂಗ್ರಹಿಸಿದೆ.

ರೇಪ್​ ಕೇಸ್​​ನಲ್ಲಿ ಪ್ರಮುಖ ಆರೋಪಿ ಟಿಎಂಸಿ ನಾಯಕನ ಪುತ್ರನೇ ಆಗಿದ್ದಾನೆ. ಹನ್ಸ್​​ಖಾಲಿಯಲ್ಲಿ ಇರುವ ಈತನ ಮನೆಯಲ್ಲಿ ಏಪ್ರಿಲ್​ 4ರಂದು ರಾತ್ರಿ ಬರ್ತ್​ ಡೇ ಪಾರ್ಟಿ ಇತ್ತು. ಆ ಪಾರ್ಟಿಗೆ ಹೋಗಿದ್ದ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅದಾದ ಕೆಲವೇ ಹೊತ್ತಲ್ಲಿ ಆಕೆ ಸಾವನ್ನಪ್ಪಿದ್ದಳು. ನಂತರ ಬಾಲಕಿಯ ತಂದೆ ಏಪ್ರಿಲ್​ 10ರಂದು ಪೊಲೀಸರಿಗೆ ದೂರು ನೀಡಿ, ಆರೋಪಿಗಳೇ ಆಕೆಯ ದೇಹವನ್ನು ಅಂತ್ಯಕ್ರಿಯೆ ಮಾಡಿದ್ದಾರೆ. ಬಂದೂಕು ತೋರಿಸಿ ಹೆದರಿಸಿ ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.

ಸಿಬಿಐ ಸಿಬ್ಬಂದಿ ಈಗಾಗಲೇ ಎರಡು ಬಾರಿ ಟಿಎಂಸಿ ಮುಖಂಡನ ಮನೆಗೆ ಭೇಟಿ ಕೊಟ್ಟು, ಹಲವು ವಸ್ತುಗಳನ್ನು  ವಶಪಡಿಸಿಕೊಂಡಿದೆ.  ಡಿಎನ್​ಎ ಪರೀಕ್ಷೆ ಎಂಬುದು ನಮ್ಮ ತನಿಖೆಗೆ ಒಂದು ನಿರ್ಣಾಯಕ ಆಯಾಮವನ್ನು ಕೊಡುತ್ತದೆ. ಈ ರೇಪ್​ ಕೇಸ್​ಗೆ ಸಂಬಂಧಿಸಿದಂತೆ ನಾವು ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ. ಬಾಲಕಿಯ ಶವವನ್ನು ಅಂತ್ಯಕ್ರಿಯೆ ಮಾಡಿದ ಸ್ಥಳಕ್ಕೂ ನಾಲ್ವರು ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಅಲ್ಲೆಲ್ಲ, ಸಮಗ್ರವಾಗಿ ವಿಡಿಯೋ ಕೂಡ ಮಾಡಲಾಗಿದೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ. ಈ ಬಾಲಕಿ ಸತ್ತಿದ್ದು ರೇಪ್​ನಿಂದಲಾ? ಅವಳು ಪ್ರೇಮ ಸಂಬಂಧ ಹೊಂದಿದ್ದಳು ಎಂದು ಪಾಲಕರೂ ಒಪ್ಪಿಕೊಂಡಿದ್ದಾರೆ. ಆಕೆ ಗರ್ಭಿಣಿಯಾಗಿದ್ದಳಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಮಮತಾ ಬ್ಯಾನರ್ಜಿ ಕೇಳಿದ್ದರು. ಇದು ಅತ್ಯಂತ ಟೀಕೆಗೆ ಗುರಿಯಾಗಿತ್ತು. ಈ ಮಧ್ಯೆ ಮುಖ್ಯಮಂತ್ರಿ ಮಹಿಳೆಯೇ ಇರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆ ಮೇಲೆ ಒಂದೇ ಒಂದು ದೌರ್ಜನ್ಯವಾದರೂ ಅದು ನಾಚಿಕೆ ಗೇಡು ಎಂದು ಟಿಎಂಸಿ ಸಂಸದರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: West Bengal Gang Rape: ಹನ್ಸ್​ಖಾಲಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನಾಯಕರ ಒತ್ತಾಯ

Published On - 9:42 am, Sat, 16 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ