AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ

ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ
ಟಿಎಂಸಿ ನಾಯಕನ ಮನೆಗೆ ಭೇಟಿ ಕೊಟ್ಟ ಸಿಬಿಐ ತಂಡ
TV9 Web
| Edited By: |

Updated on:Apr 16, 2022 | 9:43 AM

Share

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್​ಖಾಲಿಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಕೈಗೆತ್ತಿಕೊಂಡಿದ್ದು, ಡಿಎನ್​ಎ ಟೆಸ್ಟ್​ ನಡೆಸಲು ಯೋಜನೆ ರೂಪಿಸುತ್ತಿದೆ. ಅಪರಾಧ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಾದರಿಗಳು, ಬಂಧಿತರಾದ ಆರೋಪಿಗಳೊಂದಿಗೆ ಹೊಂದಿಕೆಯಾಗುತ್ತದೆಯೇ ಎಂಬುದನ್ನು ಪರಿಶೀಲಿಸಲು ಮುಂದಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.  ಈ ಪ್ರಕರಣಕ್ಕೆ ಸಂಬಂಧಪಟ್ಟು ಸ್ಥಳೀಯ ಟಿಎಂಸಿ ಮುಖಂಡನೊಬ್ಬನ ಪುತ್ರ ಮತ್ತು ಇನ್ನೊಬ್ಬನನ್ನು ಈಗಾಗಲೇ ಬಂಧಿಸಲಾಗಿದ್ದು, ಡಿಎನ್​ಎ ಟೆಸ್ಟ್ ಮಾಡಿಸಲು ಯೋಜನೆ ರೂಪಿಸಿರುವ ಸಿಬಿಐ ಈಗಾಗಲೇ ಟಿಎಂಸಿ ನಾಯಕನ ಮನೆಗೆ ಭೇಟಿ ನೀಡಿ, ಟೆಸ್ಟ್​ಗೆ ಬೇಕಾದ ಅಂಶಗಳನ್ನು ಸಂಗ್ರಹಿಸಿದೆ.

ರೇಪ್​ ಕೇಸ್​​ನಲ್ಲಿ ಪ್ರಮುಖ ಆರೋಪಿ ಟಿಎಂಸಿ ನಾಯಕನ ಪುತ್ರನೇ ಆಗಿದ್ದಾನೆ. ಹನ್ಸ್​​ಖಾಲಿಯಲ್ಲಿ ಇರುವ ಈತನ ಮನೆಯಲ್ಲಿ ಏಪ್ರಿಲ್​ 4ರಂದು ರಾತ್ರಿ ಬರ್ತ್​ ಡೇ ಪಾರ್ಟಿ ಇತ್ತು. ಆ ಪಾರ್ಟಿಗೆ ಹೋಗಿದ್ದ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅದಾದ ಕೆಲವೇ ಹೊತ್ತಲ್ಲಿ ಆಕೆ ಸಾವನ್ನಪ್ಪಿದ್ದಳು. ನಂತರ ಬಾಲಕಿಯ ತಂದೆ ಏಪ್ರಿಲ್​ 10ರಂದು ಪೊಲೀಸರಿಗೆ ದೂರು ನೀಡಿ, ಆರೋಪಿಗಳೇ ಆಕೆಯ ದೇಹವನ್ನು ಅಂತ್ಯಕ್ರಿಯೆ ಮಾಡಿದ್ದಾರೆ. ಬಂದೂಕು ತೋರಿಸಿ ಹೆದರಿಸಿ ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.

ಸಿಬಿಐ ಸಿಬ್ಬಂದಿ ಈಗಾಗಲೇ ಎರಡು ಬಾರಿ ಟಿಎಂಸಿ ಮುಖಂಡನ ಮನೆಗೆ ಭೇಟಿ ಕೊಟ್ಟು, ಹಲವು ವಸ್ತುಗಳನ್ನು  ವಶಪಡಿಸಿಕೊಂಡಿದೆ.  ಡಿಎನ್​ಎ ಪರೀಕ್ಷೆ ಎಂಬುದು ನಮ್ಮ ತನಿಖೆಗೆ ಒಂದು ನಿರ್ಣಾಯಕ ಆಯಾಮವನ್ನು ಕೊಡುತ್ತದೆ. ಈ ರೇಪ್​ ಕೇಸ್​ಗೆ ಸಂಬಂಧಿಸಿದಂತೆ ನಾವು ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ. ಬಾಲಕಿಯ ಶವವನ್ನು ಅಂತ್ಯಕ್ರಿಯೆ ಮಾಡಿದ ಸ್ಥಳಕ್ಕೂ ನಾಲ್ವರು ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಅಲ್ಲೆಲ್ಲ, ಸಮಗ್ರವಾಗಿ ವಿಡಿಯೋ ಕೂಡ ಮಾಡಲಾಗಿದೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ. ಈ ಬಾಲಕಿ ಸತ್ತಿದ್ದು ರೇಪ್​ನಿಂದಲಾ? ಅವಳು ಪ್ರೇಮ ಸಂಬಂಧ ಹೊಂದಿದ್ದಳು ಎಂದು ಪಾಲಕರೂ ಒಪ್ಪಿಕೊಂಡಿದ್ದಾರೆ. ಆಕೆ ಗರ್ಭಿಣಿಯಾಗಿದ್ದಳಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಮಮತಾ ಬ್ಯಾನರ್ಜಿ ಕೇಳಿದ್ದರು. ಇದು ಅತ್ಯಂತ ಟೀಕೆಗೆ ಗುರಿಯಾಗಿತ್ತು. ಈ ಮಧ್ಯೆ ಮುಖ್ಯಮಂತ್ರಿ ಮಹಿಳೆಯೇ ಇರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆ ಮೇಲೆ ಒಂದೇ ಒಂದು ದೌರ್ಜನ್ಯವಾದರೂ ಅದು ನಾಚಿಕೆ ಗೇಡು ಎಂದು ಟಿಎಂಸಿ ಸಂಸದರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: West Bengal Gang Rape: ಹನ್ಸ್​ಖಾಲಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನಾಯಕರ ಒತ್ತಾಯ

Published On - 9:42 am, Sat, 16 April 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ