Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ

ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ
ಟಿಎಂಸಿ ನಾಯಕನ ಮನೆಗೆ ಭೇಟಿ ಕೊಟ್ಟ ಸಿಬಿಐ ತಂಡ
Follow us
TV9 Web
| Updated By: Lakshmi Hegde

Updated on:Apr 16, 2022 | 9:43 AM

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್​ಖಾಲಿಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಕೈಗೆತ್ತಿಕೊಂಡಿದ್ದು, ಡಿಎನ್​ಎ ಟೆಸ್ಟ್​ ನಡೆಸಲು ಯೋಜನೆ ರೂಪಿಸುತ್ತಿದೆ. ಅಪರಾಧ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಾದರಿಗಳು, ಬಂಧಿತರಾದ ಆರೋಪಿಗಳೊಂದಿಗೆ ಹೊಂದಿಕೆಯಾಗುತ್ತದೆಯೇ ಎಂಬುದನ್ನು ಪರಿಶೀಲಿಸಲು ಮುಂದಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.  ಈ ಪ್ರಕರಣಕ್ಕೆ ಸಂಬಂಧಪಟ್ಟು ಸ್ಥಳೀಯ ಟಿಎಂಸಿ ಮುಖಂಡನೊಬ್ಬನ ಪುತ್ರ ಮತ್ತು ಇನ್ನೊಬ್ಬನನ್ನು ಈಗಾಗಲೇ ಬಂಧಿಸಲಾಗಿದ್ದು, ಡಿಎನ್​ಎ ಟೆಸ್ಟ್ ಮಾಡಿಸಲು ಯೋಜನೆ ರೂಪಿಸಿರುವ ಸಿಬಿಐ ಈಗಾಗಲೇ ಟಿಎಂಸಿ ನಾಯಕನ ಮನೆಗೆ ಭೇಟಿ ನೀಡಿ, ಟೆಸ್ಟ್​ಗೆ ಬೇಕಾದ ಅಂಶಗಳನ್ನು ಸಂಗ್ರಹಿಸಿದೆ.

ರೇಪ್​ ಕೇಸ್​​ನಲ್ಲಿ ಪ್ರಮುಖ ಆರೋಪಿ ಟಿಎಂಸಿ ನಾಯಕನ ಪುತ್ರನೇ ಆಗಿದ್ದಾನೆ. ಹನ್ಸ್​​ಖಾಲಿಯಲ್ಲಿ ಇರುವ ಈತನ ಮನೆಯಲ್ಲಿ ಏಪ್ರಿಲ್​ 4ರಂದು ರಾತ್ರಿ ಬರ್ತ್​ ಡೇ ಪಾರ್ಟಿ ಇತ್ತು. ಆ ಪಾರ್ಟಿಗೆ ಹೋಗಿದ್ದ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅದಾದ ಕೆಲವೇ ಹೊತ್ತಲ್ಲಿ ಆಕೆ ಸಾವನ್ನಪ್ಪಿದ್ದಳು. ನಂತರ ಬಾಲಕಿಯ ತಂದೆ ಏಪ್ರಿಲ್​ 10ರಂದು ಪೊಲೀಸರಿಗೆ ದೂರು ನೀಡಿ, ಆರೋಪಿಗಳೇ ಆಕೆಯ ದೇಹವನ್ನು ಅಂತ್ಯಕ್ರಿಯೆ ಮಾಡಿದ್ದಾರೆ. ಬಂದೂಕು ತೋರಿಸಿ ಹೆದರಿಸಿ ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.

ಸಿಬಿಐ ಸಿಬ್ಬಂದಿ ಈಗಾಗಲೇ ಎರಡು ಬಾರಿ ಟಿಎಂಸಿ ಮುಖಂಡನ ಮನೆಗೆ ಭೇಟಿ ಕೊಟ್ಟು, ಹಲವು ವಸ್ತುಗಳನ್ನು  ವಶಪಡಿಸಿಕೊಂಡಿದೆ.  ಡಿಎನ್​ಎ ಪರೀಕ್ಷೆ ಎಂಬುದು ನಮ್ಮ ತನಿಖೆಗೆ ಒಂದು ನಿರ್ಣಾಯಕ ಆಯಾಮವನ್ನು ಕೊಡುತ್ತದೆ. ಈ ರೇಪ್​ ಕೇಸ್​ಗೆ ಸಂಬಂಧಿಸಿದಂತೆ ನಾವು ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ. ಬಾಲಕಿಯ ಶವವನ್ನು ಅಂತ್ಯಕ್ರಿಯೆ ಮಾಡಿದ ಸ್ಥಳಕ್ಕೂ ನಾಲ್ವರು ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಅಲ್ಲೆಲ್ಲ, ಸಮಗ್ರವಾಗಿ ವಿಡಿಯೋ ಕೂಡ ಮಾಡಲಾಗಿದೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಅತ್ಯಾಚಾರ ಕೇಸ್​ ದೇಶಾದ್ಯಂತ ಸುದ್ದಿಯಾಗಿದೆ. ಅದರಲ್ಲೂ ಮಮತಾ ಬ್ಯಾನರ್ಜಿ ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ. ಈ ಬಾಲಕಿ ಸತ್ತಿದ್ದು ರೇಪ್​ನಿಂದಲಾ? ಅವಳು ಪ್ರೇಮ ಸಂಬಂಧ ಹೊಂದಿದ್ದಳು ಎಂದು ಪಾಲಕರೂ ಒಪ್ಪಿಕೊಂಡಿದ್ದಾರೆ. ಆಕೆ ಗರ್ಭಿಣಿಯಾಗಿದ್ದಳಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಮಮತಾ ಬ್ಯಾನರ್ಜಿ ಕೇಳಿದ್ದರು. ಇದು ಅತ್ಯಂತ ಟೀಕೆಗೆ ಗುರಿಯಾಗಿತ್ತು. ಈ ಮಧ್ಯೆ ಮುಖ್ಯಮಂತ್ರಿ ಮಹಿಳೆಯೇ ಇರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆ ಮೇಲೆ ಒಂದೇ ಒಂದು ದೌರ್ಜನ್ಯವಾದರೂ ಅದು ನಾಚಿಕೆ ಗೇಡು ಎಂದು ಟಿಎಂಸಿ ಸಂಸದರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: West Bengal Gang Rape: ಹನ್ಸ್​ಖಾಲಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನಾಯಕರ ಒತ್ತಾಯ

Published On - 9:42 am, Sat, 16 April 22

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!