AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE co-location scam case: NSE ಕೋ ಲೋಕೇಷನ್ ಹಗರಣ; ಮುಂಬೈ, ಕೋಲ್ಕತಾ ಸೇರಿ 10 ಸ್ಥಳಗಳಲ್ಲಿ ಸಿಬಿಐ ಶೋಧ

NSE co-location scam case | CBI Searches: NSE ಕೋ ಲೋಕೇಷನ್ ಹಗರಣದಲ್ಲಿ (NSE co-location scam case) ಬ್ರೋಕರ್, ಟ್ರೇಡರ್​ಗಳ ಮೇಲೆ ಸಿಬಿಐ (CBI Raid) ದಾಳಿ ನಡೆಸಿದೆ.

NSE co-location scam case: NSE ಕೋ ಲೋಕೇಷನ್ ಹಗರಣ; ಮುಂಬೈ, ಕೋಲ್ಕತಾ ಸೇರಿ 10 ಸ್ಥಳಗಳಲ್ಲಿ ಸಿಬಿಐ ಶೋಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 21, 2022 | 12:09 PM

Share

ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ ಕೋ ಲೋಕೇಷನ್ ಹಗರಣದಲ್ಲಿ (NSE co-location scam case) ಬ್ರೋಕರ್, ಟ್ರೇಡರ್​ಗಳ ಮೇಲೆ ಸಿಬಿಐ (CBI Raid) ದಾಳಿ ನಡೆಸಿದೆ. ಮುಂಬೈ, ಗಾಂಧಿನಗರ, ಗುರುಗ್ರಾಮ, ಕೋಲ್ಕತಾ ಸೇರಿದಂತೆ ಹತ್ತು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದೆ ಎಂದು ಎಎನ್​ಐ ವರದಿ ಮಾಡಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಸಿಇಒ ಮತ್ತು ಎಂಡಿ ಚಿತ್ರಾ ರಾಮಕೃಷ್ಣ ಮತ್ತು ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ವಿರುದ್ಧ ಕೇಂದ್ರೀಯ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಿದೆ. ಎನ್​ಎಸ್​ಇ ಅಧಿಕಾರಿಗಳು ಕೆಲವು ಬ್ರೋಕರ್​ಗಳಿಗೆ ತಮ್ಮ ಅಧಿಕಾರಾವಧಿಯಲ್ಲಿ ಪ್ರಾಶಸ್ತ್ಯವನ್ನು ನೀಡಿದ್ದರು. ಅದರಿಂದ ಮಾಡಲಾಗಿರುವ ಅಕ್ರಮ ಲಾಭದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಎಎನ್​ಐ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ
Image
Rahul Gandhi: ‘ಮಾತುಗಳನ್ನು ಕೇಳಿಸಿಕೊಳ್ಳುವ ಮನೋಭಾವ ಪ್ರಧಾನಿಯವರಿಗಿಲ್ಲ’; ಲಂಡನ್​ನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ 
Image
Ram Nath Kovind: ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತು ಸುಧಾರಣೆಗೆ ಕರೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್
Image
PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಮಾರ್ಚ್‌ನಲ್ಲಿ ಬಂಧಿಸಿತ್ತು. ಎನ್‌ಎಸ್‌ಇ ಕೋ-ಲೋಕೇಷನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಗೆ ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಸಲಹೆಗಾರರಾಗಿದ್ದ ಆನಂದ್ ಸುಬ್ರಮಣಿಯನ್ ಅವರನ್ನು ಫೆಬ್ರವರಿ ತಿಂಗಳಲ್ಲಿ ಬಂಧಿಸಲಾಗಿತ್ತು.

ಇತ್ತೀಚೆಗೆ (ಮೇ.18) (NSE) ಚಿತ್ರಾ ರಾಮಕೃಷ್ಣ ಅವರು ಕೋ-ಲೋಕೇಷನ್ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ತಲ್ವಂತ್ ಸಿಂಗ್ ಅವರ ಪೀಠವು ಈ ಪ್ರಕರಣದ ವಿಚಾರಣೆಗೆ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: NSE Case: ಎನ್​ಎಸ್​ಇ ಪ್ರಕರಣದಲ್ಲಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಚಿತ್ರಾ ರಾಮಕೃಷ್ಣ ಅಹವಾಲು ಆಲಿಸಲು ನಿರಾಕರಣೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Sat, 21 May 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?