AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು

ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 25, 2023 | 6:01 PM

Share

ಮುಖ್ಯಾಂಶಗಳು

  • ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.
  • ಕಳೆದ ವಾರ ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಕರಣದ ಸಾಕ್ಷಿಯಾಗಿ ವಿಚಾರಣೆ ನಡೆಸಿತ್ತು.
  • ಸಿಸೋಡಿಯಾ ಆರೋಪವನ್ನು ನಿರಾಕರಿಸಿದ್ದು ತಮ್ಮ ವಿರುದ್ಧ ಕೇಂದ್ರೀಯ ಏಜೆನ್ಸಿ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ

ದೆಹಲಿ: ಅಬಕಾರಿ ನೀತಿ ಹಗರ(Delhi liquor policy scam) ಆರೋಪದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಮತ್ತು ಇತರ ಮೂವರ ವಿರುದ್ದ ಸಿಬಿಐ (CBI) ಮಂಗಳವಾರ ಆರೋಪಪಟ್ಟಿ ದಾಖಲಿಸಿದೆ. ಹೈದರಾಬಾದ್ ಮೂಲದ ಸಿಎ ಬುಚ್ಚಿ ಬಾಬು ಗೋರಂಟ್ಲಾ, ಅರ್ಜುನ್ ಪಾಂಡೆ ಮತ್ತು ಅಮನದೀಪ್ ಸಿಂಗ್ ಧಲ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 120 ಬಿ, 201 ಮತ್ತು 420 ಮತ್ತು . ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್ 7, 7 ಎ, 8 ಮತ್ತು 13 ರ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೊಡ್ಡ ಪಿತೂರಿ ಮತ್ತು ಇತರ ಆರೋಪಿಗಳ ಪಾತ್ರವನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ ಎಂದು ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತನಿಖಾ ಸಂಸ್ಥೆ ತಿಳಿಸಿದೆ.

ಬೆಳಗ್ಗೆ ಮಲ್ಟಿಪಲ್ ಸ್ಕ್ಲೆರೋಸಿಸ್​​ನಿಂದ ಬಳಲುತ್ತಿರುವ ಸಿಸೋಡಿಯಾ ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಆರೋಗ್ಯ ಹದಗೆಟ್ಟ ನಂತರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು ಬಂದಿದ್ದು ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

ಕಳೆದ ವಾರ ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಕರಣದ ಸಾಕ್ಷಿಯಾಗಿ ವಿಚಾರಣೆ ನಡೆಸಿತ್ತು. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯೂ ಆಗಿರುವ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನೂ ಈ ಪ್ರಕರಣದಲ್ಲಿ  ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ:Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

ಮದ್ಯದ ನೀತಿ ಪ್ರಕರಣವನ್ನು ತಿರುಚಿದ್ದು ಎಂ ಕೇಜ್ರಿವಾಲ್, ಕೇಂದ್ರವು ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅದನ್ನು ಗುರಿಯಾಗಿಸುತ್ತಿದೆ ಎಂದಿದ್ದಾರೆ.  ನಮ್ಮ ಹಾಗೂ ನಮ್ಮ ಒಳ್ಳೆಯ, ಅಭಿವೃದ್ಧಿ ಕೆಲಸಗಳಿಗೆ ಹಾನಿ ಮಾಡಲು ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಸೋಡಿಯಾ ಆರೋಪವನ್ನು ನಿರಾಕರಿಸಿದ್ದು ತಮ್ಮ ವಿರುದ್ಧ ಕೇಂದ್ರೀಯ ಏಜೆನ್ಸಿ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಮ್ಮ ಜಾಮೀನು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಫೆಬ್ರವರಿ 26 ರಂದು ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರನ್ನು  ಬಂಧಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Tue, 25 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ