AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು