AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್