AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ