AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ
ಅನಿಲ್​ ದೇಶಮುಖ್​
Lakshmi Hegde
|

Updated on: Apr 24, 2021 | 10:36 AM

Share

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಮಾಡಿದ್ದ ಭ್ರಷ್ಟಾಚಾರ, ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶ್​​ಮುಖ್​ ವಿರುದ್ಧ ಸಿಬಿಐ ಎಫ್ಐಆರ್​ ದಾಖಲಿಸಿದೆ. ಹಾಗೇ ಅನಿಲ್ ದೇಶ್​​ಮುಖ್​ಗೆ ಸಂಬಂಧಪಟ್ಟ ಹಲವು ಪ್ರದೇಶಗಳನ್ನು ರೇಡ್​ ಮಾಡಿದೆ. ಅನಿಲ್​ ದೇಶಮುಖ್​ ಅವರು ತಮ್ಮ ಅಧೀನ ಅಧಿಕಾರಿಗಳ ಮೂಲಕ ಮುಂಬೈನ ಬಾರ್​, ರೆಸ್ಟೋರೆಂಟ್, ಹೋಟೆಲ್​​ಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಪರಮ್​ಬೀರ್ ಸಿಂಗ್​ ಅವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರಿಗೆ ಪತ್ರ ಬರೆದಿದ್ದರು. ಈ ಪತ್ರದ ಅನ್ವಯ ಏಪ್ರಿಲ್​ 14ರಂದು ಸಿಬಿಐ ಅನಿಲ್​ ದೇಶ​​ಮುಖ್​​ಗೆ ಸಮನ್ಸ್​ ನೀಡಿತ್ತು.

ಮುಂಬೈನ ಬಾರ್​, ಹೊಟೆಲ್, ರೆಸ್ಟೋರೆಂಟ್​ ಮತ್ತಿತರ ಮೂಲಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹೇಳಿದ್ದರು. (ಮುಕೇಶ್​ ಅಂಬಾನಿ ಮನೆಯ ಬಳಿ ಬಾಂಬ್​ ಸ್ಫೋಟದ ಕೇಸ್​ನಲ್ಲಿ ಸದ್ಯ ಅಮಾನತುಗೊಂಡ ಪೊಲೀಸ್ ಅಧಿಕಾರಿ) ಎಂದು ಪರಮ್​ಬೀರ್ ಸಿಂಗ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿ, ಆರೋಪ ಮಾಡಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ, ಅನಿಲ್​ ದೇಶಮುಖ್​ ಅವರ ಆಪ್ತ ಸಹಾಯಕರಾದ ಸಂಜೀವ್​ ಪಾಲಂದೆ ಮತ್ತು ಕುಂದಾನ್​ ಶಿಂಧೆ, ಮಾಜಿ ಪೊಲೀಸ್ ಅಧಿಕಾರಿ ಸಚಿನ್​ ವಾಝೆಯ ಇಬ್ಬರು ಚಾಲಕರು, ಬಾರ್​ ಮಾಲೀಕರು, ಮುಂಬೈ ಪೊಲೀಸ್ ಅಧಿಕಾರಿಗಳು ಹಾಗೂ ದೇಶಮುಖ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರನ್ನೂ ಸಿಬಿಐ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ.

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಸಿಬಿಐ ಇದನ್ನು ಸೀರಿಯಸ್​ ಆಗಿ ತೆಗೆದುಕೊಂಡಿದೆ.

ಇದನ್ನೂ ಓದಿ: Happy Birthday Sachin: ಸಚಿನ್ ಬ್ಯಾಟಿಂಗ್ ಮಾಡುವಾಗ ನನ್ನ ದೇಶದ ಉತ್ಪಾದನೆಯು 5 % ಇಳಿಕೆಯಾಗುತ್ತಿತ್ತು; ಬರಾಕ್ ಒಬಾಮ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ