AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ
ಅನಿಲ್​ ದೇಶಮುಖ್​
Lakshmi Hegde
|

Updated on: Apr 24, 2021 | 10:36 AM

Share

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಮಾಡಿದ್ದ ಭ್ರಷ್ಟಾಚಾರ, ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶ್​​ಮುಖ್​ ವಿರುದ್ಧ ಸಿಬಿಐ ಎಫ್ಐಆರ್​ ದಾಖಲಿಸಿದೆ. ಹಾಗೇ ಅನಿಲ್ ದೇಶ್​​ಮುಖ್​ಗೆ ಸಂಬಂಧಪಟ್ಟ ಹಲವು ಪ್ರದೇಶಗಳನ್ನು ರೇಡ್​ ಮಾಡಿದೆ. ಅನಿಲ್​ ದೇಶಮುಖ್​ ಅವರು ತಮ್ಮ ಅಧೀನ ಅಧಿಕಾರಿಗಳ ಮೂಲಕ ಮುಂಬೈನ ಬಾರ್​, ರೆಸ್ಟೋರೆಂಟ್, ಹೋಟೆಲ್​​ಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಪರಮ್​ಬೀರ್ ಸಿಂಗ್​ ಅವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರಿಗೆ ಪತ್ರ ಬರೆದಿದ್ದರು. ಈ ಪತ್ರದ ಅನ್ವಯ ಏಪ್ರಿಲ್​ 14ರಂದು ಸಿಬಿಐ ಅನಿಲ್​ ದೇಶ​​ಮುಖ್​​ಗೆ ಸಮನ್ಸ್​ ನೀಡಿತ್ತು.

ಮುಂಬೈನ ಬಾರ್​, ಹೊಟೆಲ್, ರೆಸ್ಟೋರೆಂಟ್​ ಮತ್ತಿತರ ಮೂಲಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹೇಳಿದ್ದರು. (ಮುಕೇಶ್​ ಅಂಬಾನಿ ಮನೆಯ ಬಳಿ ಬಾಂಬ್​ ಸ್ಫೋಟದ ಕೇಸ್​ನಲ್ಲಿ ಸದ್ಯ ಅಮಾನತುಗೊಂಡ ಪೊಲೀಸ್ ಅಧಿಕಾರಿ) ಎಂದು ಪರಮ್​ಬೀರ್ ಸಿಂಗ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿ, ಆರೋಪ ಮಾಡಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ, ಅನಿಲ್​ ದೇಶಮುಖ್​ ಅವರ ಆಪ್ತ ಸಹಾಯಕರಾದ ಸಂಜೀವ್​ ಪಾಲಂದೆ ಮತ್ತು ಕುಂದಾನ್​ ಶಿಂಧೆ, ಮಾಜಿ ಪೊಲೀಸ್ ಅಧಿಕಾರಿ ಸಚಿನ್​ ವಾಝೆಯ ಇಬ್ಬರು ಚಾಲಕರು, ಬಾರ್​ ಮಾಲೀಕರು, ಮುಂಬೈ ಪೊಲೀಸ್ ಅಧಿಕಾರಿಗಳು ಹಾಗೂ ದೇಶಮುಖ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರನ್ನೂ ಸಿಬಿಐ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ.

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಸಿಬಿಐ ಇದನ್ನು ಸೀರಿಯಸ್​ ಆಗಿ ತೆಗೆದುಕೊಂಡಿದೆ.

ಇದನ್ನೂ ಓದಿ: Happy Birthday Sachin: ಸಚಿನ್ ಬ್ಯಾಟಿಂಗ್ ಮಾಡುವಾಗ ನನ್ನ ದೇಶದ ಉತ್ಪಾದನೆಯು 5 % ಇಳಿಕೆಯಾಗುತ್ತಿತ್ತು; ಬರಾಕ್ ಒಬಾಮ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು

Follow Us
Lakshmi Hegde
Lakshmi Hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ