Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ
ಅನಿಲ್​ ದೇಶಮುಖ್​
Follow us
Lakshmi Hegde
|

Updated on: Apr 24, 2021 | 10:36 AM

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಮಾಡಿದ್ದ ಭ್ರಷ್ಟಾಚಾರ, ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶ್​​ಮುಖ್​ ವಿರುದ್ಧ ಸಿಬಿಐ ಎಫ್ಐಆರ್​ ದಾಖಲಿಸಿದೆ. ಹಾಗೇ ಅನಿಲ್ ದೇಶ್​​ಮುಖ್​ಗೆ ಸಂಬಂಧಪಟ್ಟ ಹಲವು ಪ್ರದೇಶಗಳನ್ನು ರೇಡ್​ ಮಾಡಿದೆ. ಅನಿಲ್​ ದೇಶಮುಖ್​ ಅವರು ತಮ್ಮ ಅಧೀನ ಅಧಿಕಾರಿಗಳ ಮೂಲಕ ಮುಂಬೈನ ಬಾರ್​, ರೆಸ್ಟೋರೆಂಟ್, ಹೋಟೆಲ್​​ಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಪರಮ್​ಬೀರ್ ಸಿಂಗ್​ ಅವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರಿಗೆ ಪತ್ರ ಬರೆದಿದ್ದರು. ಈ ಪತ್ರದ ಅನ್ವಯ ಏಪ್ರಿಲ್​ 14ರಂದು ಸಿಬಿಐ ಅನಿಲ್​ ದೇಶ​​ಮುಖ್​​ಗೆ ಸಮನ್ಸ್​ ನೀಡಿತ್ತು.

ಮುಂಬೈನ ಬಾರ್​, ಹೊಟೆಲ್, ರೆಸ್ಟೋರೆಂಟ್​ ಮತ್ತಿತರ ಮೂಲಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹೇಳಿದ್ದರು. (ಮುಕೇಶ್​ ಅಂಬಾನಿ ಮನೆಯ ಬಳಿ ಬಾಂಬ್​ ಸ್ಫೋಟದ ಕೇಸ್​ನಲ್ಲಿ ಸದ್ಯ ಅಮಾನತುಗೊಂಡ ಪೊಲೀಸ್ ಅಧಿಕಾರಿ) ಎಂದು ಪರಮ್​ಬೀರ್ ಸಿಂಗ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿ, ಆರೋಪ ಮಾಡಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ, ಅನಿಲ್​ ದೇಶಮುಖ್​ ಅವರ ಆಪ್ತ ಸಹಾಯಕರಾದ ಸಂಜೀವ್​ ಪಾಲಂದೆ ಮತ್ತು ಕುಂದಾನ್​ ಶಿಂಧೆ, ಮಾಜಿ ಪೊಲೀಸ್ ಅಧಿಕಾರಿ ಸಚಿನ್​ ವಾಝೆಯ ಇಬ್ಬರು ಚಾಲಕರು, ಬಾರ್​ ಮಾಲೀಕರು, ಮುಂಬೈ ಪೊಲೀಸ್ ಅಧಿಕಾರಿಗಳು ಹಾಗೂ ದೇಶಮುಖ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರನ್ನೂ ಸಿಬಿಐ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ.

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಸಿಬಿಐ ಇದನ್ನು ಸೀರಿಯಸ್​ ಆಗಿ ತೆಗೆದುಕೊಂಡಿದೆ.

ಇದನ್ನೂ ಓದಿ: Happy Birthday Sachin: ಸಚಿನ್ ಬ್ಯಾಟಿಂಗ್ ಮಾಡುವಾಗ ನನ್ನ ದೇಶದ ಉತ್ಪಾದನೆಯು 5 % ಇಳಿಕೆಯಾಗುತ್ತಿತ್ತು; ಬರಾಕ್ ಒಬಾಮ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ