AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ
ಅನಿಲ್​ ದೇಶಮುಖ್​
Lakshmi Hegde
|

Updated on: Apr 24, 2021 | 10:36 AM

Share

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ ಬೀರ್​ ಸಿಂಗ್​ ಮಾಡಿದ್ದ ಭ್ರಷ್ಟಾಚಾರ, ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್ ದೇಶ್​​ಮುಖ್​ ವಿರುದ್ಧ ಸಿಬಿಐ ಎಫ್ಐಆರ್​ ದಾಖಲಿಸಿದೆ. ಹಾಗೇ ಅನಿಲ್ ದೇಶ್​​ಮುಖ್​ಗೆ ಸಂಬಂಧಪಟ್ಟ ಹಲವು ಪ್ರದೇಶಗಳನ್ನು ರೇಡ್​ ಮಾಡಿದೆ. ಅನಿಲ್​ ದೇಶಮುಖ್​ ಅವರು ತಮ್ಮ ಅಧೀನ ಅಧಿಕಾರಿಗಳ ಮೂಲಕ ಮುಂಬೈನ ಬಾರ್​, ರೆಸ್ಟೋರೆಂಟ್, ಹೋಟೆಲ್​​ಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಪರಮ್​ಬೀರ್ ಸಿಂಗ್​ ಅವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರಿಗೆ ಪತ್ರ ಬರೆದಿದ್ದರು. ಈ ಪತ್ರದ ಅನ್ವಯ ಏಪ್ರಿಲ್​ 14ರಂದು ಸಿಬಿಐ ಅನಿಲ್​ ದೇಶ​​ಮುಖ್​​ಗೆ ಸಮನ್ಸ್​ ನೀಡಿತ್ತು.

ಮುಂಬೈನ ಬಾರ್​, ಹೊಟೆಲ್, ರೆಸ್ಟೋರೆಂಟ್​ ಮತ್ತಿತರ ಮೂಲಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹೇಳಿದ್ದರು. (ಮುಕೇಶ್​ ಅಂಬಾನಿ ಮನೆಯ ಬಳಿ ಬಾಂಬ್​ ಸ್ಫೋಟದ ಕೇಸ್​ನಲ್ಲಿ ಸದ್ಯ ಅಮಾನತುಗೊಂಡ ಪೊಲೀಸ್ ಅಧಿಕಾರಿ) ಎಂದು ಪರಮ್​ಬೀರ್ ಸಿಂಗ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿ, ಆರೋಪ ಮಾಡಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ, ಅನಿಲ್​ ದೇಶಮುಖ್​ ಅವರ ಆಪ್ತ ಸಹಾಯಕರಾದ ಸಂಜೀವ್​ ಪಾಲಂದೆ ಮತ್ತು ಕುಂದಾನ್​ ಶಿಂಧೆ, ಮಾಜಿ ಪೊಲೀಸ್ ಅಧಿಕಾರಿ ಸಚಿನ್​ ವಾಝೆಯ ಇಬ್ಬರು ಚಾಲಕರು, ಬಾರ್​ ಮಾಲೀಕರು, ಮುಂಬೈ ಪೊಲೀಸ್ ಅಧಿಕಾರಿಗಳು ಹಾಗೂ ದೇಶಮುಖ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರನ್ನೂ ಸಿಬಿಐ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ.

ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪ ಗಂಭೀರವಾಗಿದ್ದು, ಅದನ್ನು ತನಿಖೆ ನಡೆಸಬೇಕು ಎಂದು ಏಪ್ರಿಲ್​ 8ರಂದು ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಸಿಬಿಐ ಇದನ್ನು ಸೀರಿಯಸ್​ ಆಗಿ ತೆಗೆದುಕೊಂಡಿದೆ.

ಇದನ್ನೂ ಓದಿ: Happy Birthday Sachin: ಸಚಿನ್ ಬ್ಯಾಟಿಂಗ್ ಮಾಡುವಾಗ ನನ್ನ ದೇಶದ ಉತ್ಪಾದನೆಯು 5 % ಇಳಿಕೆಯಾಗುತ್ತಿತ್ತು; ಬರಾಕ್ ಒಬಾಮ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್