AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರ ಹಿಂಸಾಚಾರ ತನಿಖೆಗೆ ಸಿಬಿಐ ವಿಶೇಷ ತಂಡ ರಚನೆ

ಮಣಿಪುರ ಹಿಂಸಾಚಾರದ ತನಿಖೆಗಾಗಿ ಸಿಬಿಐ ವಿಶೇಷ ತನಿಖಾ ತಂಡವನ್ನು ರಚಿಸಿದೆ

Manipur Violence: ಮಣಿಪುರ ಹಿಂಸಾಚಾರ ತನಿಖೆಗೆ ಸಿಬಿಐ ವಿಶೇಷ ತಂಡ ರಚನೆ
ಮಣಿಪುರ ಹಿಂಸಾಚಾರ
ಅಕ್ಷಯ್​ ಪಲ್ಲಮಜಲು​​
|

Updated on:Jun 09, 2023 | 6:28 PM

Share

ಇಂಫಾಲ್: ಮಣಿಪುರ ಹಿಂಸಾಚಾರದ ತನಿಖೆಗಾಗಿ ಸಿಬಿಐ ವಿಶೇಷ ತನಿಖಾ ತಂಡವನ್ನು ರಚಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಆರು ಪ್ರಾಥಮಿಕ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸಿದೆ ಮತ್ತು ಮಣಿಪುರದಲ್ಲಿ ಮೇ 3 ರಂದು ಪ್ರಾರಂಭವಾದ ಇತ್ತೀಚಿನ ಹಿಂಸಾಚಾರದ ಹಿಂದೆ ಪಿತೂರಿಯ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಿದೆ. ಹಿಂಸಾಚಾರ, ಪ್ರಾಥಮಿಕವಾಗಿ ಕುಕಿ ಮತ್ತು ಮೈತೀ ನಡುವೆ ಸಮುದಾಯಗಳ ನಡುವೆ ಮೀಸಲಾತಿ ವಿಚಾರವಾಗಿ ನಡೆದಿದೆ ಎಂದು ಹೇಳಲಾಗಿತ್ತು. 100ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿವೆ ಮತ್ತು 35,000 ಕ್ಕೂ ಹೆಚ್ಚು ಜನರ ವಲಸೆ ಬಿಟ್ಟಿದ್ದಾರೆ.

ಮಣಿಪುರ ಸರ್ಕಾರವು ಸಿಬಿಐನ ತನಿಖೆಗಾಗಿ ಆಯ್ಕೆ ಮಾಡಿದ ಆರು ಪ್ರಕರಣಗಳಲ್ಲಿ ಜನಾಂಗೀಯ ಹಿಂಸಾಚಾರವು ಪೂರ್ವ ಯೋಜಿತವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ತನಿಖೆಯನ್ನು ನಡೆಸಲಾಗುತ್ತಿದೆ. ಹಿಂಸಾಚಾರ ಭುಗಿಲೆದ್ದ ನಂತರ ರಾಜ್ಯದಲ್ಲಿ ದಾಖಲಾದ 3,700 ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲಾಗಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗಾ ಶಾಸಕರೊಂದಿಗಿನ ಸಭೆಯಲ್ಲಿ, ಕುಕಿ ಮತ್ತು ಮೈಟೆಯಿ ಸಮುದಾಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಮತ್ತು ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸಹಾಯ ಮಾಡಲು ಕರೆ ನೀಡಿದ್ದಾರೆ. ಆಡಳಿತಕ್ಕೆ ಸಹಾಯವಾಗುವಂತೆ ಮತ್ತು ಜನರ ಅಗತ್ಯಕ್ಕೆ ಸಹಕಾರಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್, ಮಣಿಪುರದಲ್ಲಿ ಪರಿಸ್ಥಿತಿ ಶಾಂತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ, ಕಳೆದ 48 ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ. ಮಣಿಪುರದಲ್ಲಿ ನಿರಾಶ್ರಿತ ಜನರಿಗೆ ಸಹಾಯ ಮಾಡಲು ಗೃಹ ವ್ಯವಹಾರಗಳ ಸಚಿವಾಲಯ (MHA) 101.75 ಕೋಟಿ ರೂ. ಪರಿಹಾರ ಪ್ಯಾಕೇಜ್ ಅನ್ನು ನೀಡಿದೆ ಎಂದು ಹೇಳಿದೆ.

ಇದೀಗ  ಮತ್ತೆ ಮಣಿಪುರ ಹಿಂಸಾಚಾರದಲ್ಲಿ ಶಂಕಿತ ಬಂಡುಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ, 2 ಮಂದಿ ಗಾಯಗೊಂಡಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 9 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್