AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ. ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು […]

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ
Guru
| Edited By: |

Updated on: Aug 24, 2020 | 4:32 PM

Share

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ.

ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು ದಾಖಲೆ ನೀಡಿದೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದ ಸಾಲ ಬರೋಬ್ಬರಿ 938 ಕೋಟಿ ರೂ.ಗಳು.

ಯಾವಾಗ ಸರಿಯಾಗಿ ಸಾಲ ವಸೂಲಾತಿಯಾಗಿಲ್ಲವೋ ಬ್ಯಾಂಕ್‌ ಆಡಿಟರ್‌ಗಳಿಗೆ ಅನುಮಾನ ಬಂದು ಕ್ರಾಸ್‌ ಚೆಕ್‌ ಮಾಡಿದ್ದಾರೆ. ಆಗ ಗೊತ್ತಾಗಿದೆ ಕಂಪನಿಯ ಅಸಲಿ ಗೋಲ್‌ಮಾಲ್‌. ಕೆಎಸ್‌ ಆಯಿಲ್‌ ಕಂಪನಿ ಮತ್ತು ಅದರ ಮ್ಯಾನೆಜಿಂಗ್‌ ಡೈರೆಕ್ಟರ್‌ ರಮೇಶ್‌ ಚಂದ್ರ ಗರ್ಗ್‌ ಮತ್ತು ಇತರ ನಿರ್ದೇಶಕರು ಸೇರಿ ಎಸ್‌ಬಿಐ ಬ್ಯಾಂಕ್‌ಗೆ ವ್ಯಾಪಾರ ವಹಿವಾಟಿನ ಬಗ್ಗೆ ಒಂದಕ್ಕೆ ಹತ್ತು ಸೇರಿಸಿ ತಪ್ಪು ಲೆಕ್ಕಾಚಾರ ಕೊಟ್ಟು ಉಂಡೆನಾಮ ತಿಕ್ಕಿರೋದು.

ಇದು ಗೊತ್ತಾಗುತ್ತಿದ್ದಂತೆ ಈ ಗೋಲ್‌ಮಾಲ್‌ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ಈ ಸಂಬಂಧ ಈಗ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಇತರ ನಿರ್ದೇಶಕರ ಮೊರೆನಾ ಮತ್ತು ದೆಹಲಿ ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!