AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ. ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು […]

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ
Guru
| Edited By: |

Updated on: Aug 24, 2020 | 4:32 PM

Share

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ.

ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು ದಾಖಲೆ ನೀಡಿದೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದ ಸಾಲ ಬರೋಬ್ಬರಿ 938 ಕೋಟಿ ರೂ.ಗಳು.

ಯಾವಾಗ ಸರಿಯಾಗಿ ಸಾಲ ವಸೂಲಾತಿಯಾಗಿಲ್ಲವೋ ಬ್ಯಾಂಕ್‌ ಆಡಿಟರ್‌ಗಳಿಗೆ ಅನುಮಾನ ಬಂದು ಕ್ರಾಸ್‌ ಚೆಕ್‌ ಮಾಡಿದ್ದಾರೆ. ಆಗ ಗೊತ್ತಾಗಿದೆ ಕಂಪನಿಯ ಅಸಲಿ ಗೋಲ್‌ಮಾಲ್‌. ಕೆಎಸ್‌ ಆಯಿಲ್‌ ಕಂಪನಿ ಮತ್ತು ಅದರ ಮ್ಯಾನೆಜಿಂಗ್‌ ಡೈರೆಕ್ಟರ್‌ ರಮೇಶ್‌ ಚಂದ್ರ ಗರ್ಗ್‌ ಮತ್ತು ಇತರ ನಿರ್ದೇಶಕರು ಸೇರಿ ಎಸ್‌ಬಿಐ ಬ್ಯಾಂಕ್‌ಗೆ ವ್ಯಾಪಾರ ವಹಿವಾಟಿನ ಬಗ್ಗೆ ಒಂದಕ್ಕೆ ಹತ್ತು ಸೇರಿಸಿ ತಪ್ಪು ಲೆಕ್ಕಾಚಾರ ಕೊಟ್ಟು ಉಂಡೆನಾಮ ತಿಕ್ಕಿರೋದು.

ಇದು ಗೊತ್ತಾಗುತ್ತಿದ್ದಂತೆ ಈ ಗೋಲ್‌ಮಾಲ್‌ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ಈ ಸಂಬಂಧ ಈಗ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಇತರ ನಿರ್ದೇಶಕರ ಮೊರೆನಾ ಮತ್ತು ದೆಹಲಿ ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ