AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ. ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು […]

SBI ನಲ್ಲಿ ಮತ್ತೊಂದು ಭಾರೀ ಗೋಲ್‌ಮಾಲ್‌! ಎಣ್ಣೆ ಕಂಪನಿ ಮೇಲೆ CBI ದಾಳಿ
Guru
| Edited By: |

Updated on: Aug 24, 2020 | 4:32 PM

Share

ಭೋಪಾಲ್: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೂ ಹಗರಣಗಳಿಗೂ ಗಳಸ್ಯ-ಕಂಠಸ್ಯ ಅಂತಾ ಕಾಣುತ್ತೆ. ಯಾಕಂದ್ರೆ ಸದಾ ಒಂದಿಲ್ಲೊಂದು ಹಗರಣಗಳಲ್ಲಿ ಬ್ಯಾಂಕಿನ ಹೆಸರು ಥಳಕು ಹಾಕಿಕೊಳ್ಳುತ್ತಲೇ ಇದೆ. ಲೇಟೆಸ್ಟ್‌ ಸಮಾಚಾರ ಅಂದ್ರೆ ಮಧ್ಯಪ್ರದೇಶದ ಕಂಪನಿಯೊಂದಕ್ಕೆ ನೀಡಿದ ಸಾಲದಲ್ಲಿ ಗೋಲ್‌ಮಾಲ್‌ ಕಂಡು ಬಂದಿದ್ದು, ಸಿಬಿಐ ಈ ಕಂಪನಿಯ ಮೇಲೆ ದಾಳಿ ನಡೆಸಿದೆ.

ಹೌದು ಮಧ್ಯಪ್ರದೇಶದ ಮೊರೆನಾ ನಗರದ ಕೆ ಎಸ್‌ ಆಯಿಲ್ಸ್‌ ಲಿಮಿಟೆಡ್‌ ಕಂಪನಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ ಪಡೆಯುವಾಗ ತನ್ನ ಬಳಿ ಇರುವ ಸ್ವತ್ತುಗಳು ಮತ್ತು ವ್ಯಾಪಾರ ವಹಿವಾಟಿನ ಬಗ್ಗೆ ಸುಳ್ಳು ದಾಖಲೆ ನೀಡಿದೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದ ಸಾಲ ಬರೋಬ್ಬರಿ 938 ಕೋಟಿ ರೂ.ಗಳು.

ಯಾವಾಗ ಸರಿಯಾಗಿ ಸಾಲ ವಸೂಲಾತಿಯಾಗಿಲ್ಲವೋ ಬ್ಯಾಂಕ್‌ ಆಡಿಟರ್‌ಗಳಿಗೆ ಅನುಮಾನ ಬಂದು ಕ್ರಾಸ್‌ ಚೆಕ್‌ ಮಾಡಿದ್ದಾರೆ. ಆಗ ಗೊತ್ತಾಗಿದೆ ಕಂಪನಿಯ ಅಸಲಿ ಗೋಲ್‌ಮಾಲ್‌. ಕೆಎಸ್‌ ಆಯಿಲ್‌ ಕಂಪನಿ ಮತ್ತು ಅದರ ಮ್ಯಾನೆಜಿಂಗ್‌ ಡೈರೆಕ್ಟರ್‌ ರಮೇಶ್‌ ಚಂದ್ರ ಗರ್ಗ್‌ ಮತ್ತು ಇತರ ನಿರ್ದೇಶಕರು ಸೇರಿ ಎಸ್‌ಬಿಐ ಬ್ಯಾಂಕ್‌ಗೆ ವ್ಯಾಪಾರ ವಹಿವಾಟಿನ ಬಗ್ಗೆ ಒಂದಕ್ಕೆ ಹತ್ತು ಸೇರಿಸಿ ತಪ್ಪು ಲೆಕ್ಕಾಚಾರ ಕೊಟ್ಟು ಉಂಡೆನಾಮ ತಿಕ್ಕಿರೋದು.

ಇದು ಗೊತ್ತಾಗುತ್ತಿದ್ದಂತೆ ಈ ಗೋಲ್‌ಮಾಲ್‌ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ಈ ಸಂಬಂಧ ಈಗ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಇತರ ನಿರ್ದೇಶಕರ ಮೊರೆನಾ ಮತ್ತು ದೆಹಲಿ ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು