AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್ ಅತ್ಯಾಚಾರ ವರದಿಯನ್ನು ಹೈಕೋರ್ಟ್​ಗೆ ನೀಡಿದ ಸಿಬಿಐ

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು.

sandhya thejappa
sandhya thejappa| Edited By: |

Updated on: Nov 26, 2020 | 6:34 PM

Share

ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಅಲಹಾಬಾದ್ ಹೈಕೋರ್ಟ್​ನ ಲಖನೌ ನ್ಯಾಯಪೀಠಕ್ಕೆ ನೀಡಿದ ಸಿಬಿಐ, ಡಿಸೆಂಬರ್ 10ರೊಳಗೆ ತನಿಖೆ ಮುಗಿಯಲಿದೆ ಎಂದು ತಿಳಿಸಿದೆ. ವಿಧಿ ವಿಜ್ಞಾನ ವರದಿಗಳಿಗೆ ಕಾಯುತ್ತಿರುವುದರಿಂದ ತನಿಖೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸಿಬಿಐ ವಕೀಲ ಅನುರಾಗ್ ಸಿಂಗ್ ಹೈಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರಿದ್ದ ನ್ಯಾಯಪೀಠ ವಾದವನ್ನು ಆಲಿಸಿತು.

ಹತ್ರಾಸ್​ ಮ್ಯಾಜಿಸ್ಟ್ರೇಟ್ ಅವರನ್ನು ಸ್ಥಳಾಂತರಿಸದಿರುವ ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಹತ್ರಾಸ್ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆಂದು ಈ ಹಿಂದೆ ಅಫಿಡವಿಟ್ ಸಲ್ಲಿಸಿದ ಹಿರಿಯ ವಕೀಲ ಎಸ್.ವಿ ರಾಜು ಮತ್ತು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕೆ ಸಾಹಿ ಕೋರ್ಟ್​ಗೆ ಮನವವರಿಕೆ ಮಾಡಿಕೊಡಲು ಯತ್ನಿಸಿದರು.

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು. ಡಿ.16ರಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ