AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-UG 2026 case: ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಶಿಕ್ಷಕರಿಂದಲೇ ಸೋರಿಕೆ, ಸಿಬಿಐ ಸ್ಫೋಟಕ ಮಾಹಿತಿ ಬಹಿರಂಗ

ನೀಟ್-ಯುಜಿ (NEET-UG) 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯನ್ನು ಪಡೆದುಕೊಂಡಿದೆ. ಇನ್ನು ಈ ಕೇಸಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಮೂವರು ತಜ್ಞರು ಸೇರಿದಂತೆ ಒಟ್ಟು 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರ ಮಧ್ಯೆ ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿನ ಕೈಗಳನ್ನ ಪತ್ತೆ ಮಾಡಿದೆ.

NEET-UG 2026 case: ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಶಿಕ್ಷಕರಿಂದಲೇ ಸೋರಿಕೆ, ಸಿಬಿಐ ಸ್ಫೋಟಕ ಮಾಹಿತಿ ಬಹಿರಂಗ
NEET UG 2026 Paper Leak Case
ರಮೇಶ್ ಬಿ. ಜವಳಗೇರಾ
| Edited By: |

Updated on:Jul 31, 2026 | 10:21 AM

Share

ನವದೆಹಲಿ, (ಜುಲೈ 30): ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆಯುವ ನೀಟ್-ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆಯಲ್ಲಿ ಸ್ಫೋಟಕ ಅಂಶಗಳು ಹೊರಬಂದಿವೆ. ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಮತ್ತು ಅದನ್ನು ಅನುವಾದಿಸುವ ಜವಾಬ್ದಾರಿಯನ್ನು ಹೊತ್ತಿದ್ದ ಕೆಲವು ಶಿಕ್ಷಕರೇ ಸೋರಿಕೆಗೆ ನೇರವಾಗಿ ಕಾರಣರಾಗಿದ್ದಾರೆ ಎಂದು ಸಿಬಿಐ ವರದಿ ಬಹಿರಂಗಪಡಿಸಿದೆ.

ನೀಟ್-ಯುಜಿ 2026ರ ಪರೀಕ್ಷೆಯ ಗೌಪ್ಯತೆಯನ್ನು ಕಾಪಾಡುವಲ್ಲಿ ಭಾರಿ ಲೋಪವಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಶ್ನೆ ಪತ್ರಿಕೆ ತಯಾರಿಸುವುದು ಮತ್ತು ಅದರ ಅನುವಾದದಂತಹ ಸೂಕ್ಷ್ಮ ಕೆಲಸಗಳನ್ನು ಒಂದೇ ಗುಂಪಿನ ವ್ಯಕ್ತಿಗಳಿಗೆ ವಹಿಸಿರುವುದು ಈ ಪ್ರಮಾದಕ್ಕೆ ಕಾರಣವಾಗಿದೆ ಎಂಬುದಾಗಿ ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ. ನಿಯಮಿತ ಗುಂಪಿನ ಶಿಕ್ಷಕರಿಗೆ ಪ್ರಮುಖ ಕೆಲಸಗಳನ್ನು ವಹಿಸಿದ್ದು, ಅವರಿಂದಲೇ ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿದೆ ಎಂದು ಕೂಡ ತಿಳಿಸಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲೂ ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರ; ರಾಷ್ಟ್ರಪತಿಯ ಸಮ್ಮತಿ ಬಾಕಿ

ಪ್ರಶ್ನೆಗಳನ್ನು ರೂಪಿಸಿದ ಮತ್ತು ಅನುವಾದಿಸಿದ ಕೆಲ ಶಿಕ್ಷಕರು, ಪರೀಕ್ಷೆಯ ಪ್ರಶ್ನೆಗಳನ್ನು ಮರುಸೃಷ್ಟಿಸಿ ಕೆಲವು ಕೋಚಿಂಗ್ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿಕೊಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ಪತ್ತೆಹಚ್ಚಿದೆ. ಈ ಘಟನೆಯು ಪರೀಕ್ಷೆಯ ಪಾವಿತ್ರ್ಯತೆ ಹಾಗೂ ಪಾರದರ್ಶಕತೆಗೆ ಧಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳನ್ನು ತಡೆಯಲು ಪರೀಕ್ಷಾ ವ್ಯವಸ್ಥೆ ಮತ್ತು ಪ್ರಕ್ರಿಯೆಗಳಲ್ಲಿ ಕಟ್ಟುನಿಟ್ಟಾದ ಬದಲಾವಣೆಗಳನ್ನು ತರುವಂತೆಯೂ ಸಿಬಿಐ ಶಿಫಾರಸು ಮಾಡಿದೆ.

ನೀಟ್ ಪ್ರಶ್ನೆಪತ್ರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆದ ಬಳಿಕ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರಿಗೆ 10 ವರ್ಷ ಜೈಲು ಹಾಗೂ ಭಾರಿ ದಂಡ ವಿಧಿಸುವ ವಿಧೇಯಕಕ್ಕೆ ಸಂಸತ್ತಿನಲ್ಲಿ ಅಂಗೀಕಾರವೂ ದೊರೆತಿದೆ. ಮತ್ತೊಂದೆಡೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 pm, Thu, 30 July 26

Follow Us