AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್​ ಹಿಂಸಾಚಾರ; ತನಿಖೆ ಪ್ರಾರಂಭಿಸಿದ ಸಿಬಿಐನಿಂದ ಎಫ್​ಐಆರ್ ದಾಖಲು, 21 ಜನರ ಹೆಸರು ಉಲ್ಲೇಖ

ಈ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಕೋಲ್ಕತ್ತ ಹೈಕೋರ್ಟ್​, ತನಿಖೆ ಶುರುಮಾಡುವಂತೆ ಸಿಬಿಐಗೆ ಸೂಚಿಸಿತ್ತು. ಅದರ ಅನ್ವಯ ಸಿಬಿಐ ವಿಚಾರಣೆ ಶುರು ಮಾಡಿದೆ.

ಬಿರ್ಭೂಮ್​ ಹಿಂಸಾಚಾರ; ತನಿಖೆ ಪ್ರಾರಂಭಿಸಿದ ಸಿಬಿಐನಿಂದ ಎಫ್​ಐಆರ್ ದಾಖಲು, 21 ಜನರ ಹೆಸರು ಉಲ್ಲೇಖ
ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ತನಿಖಾ ಅಧಿಕಾರಿಗಳು
TV9 Web
| Edited By: |

Updated on:Mar 26, 2022 | 3:03 PM

Share

ಪಶ್ಚಿಮ ಬಂಗಾಳದ ಬಿರ್ಭೂಮ್​ನಲ್ಲಿ ನಡೆದ ಹಿಂಸಾಚಾರ (Birbhum Arson) ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಎಫ್​ಐಆರ್ ದಾಖಲಿಸಿದೆ. ಈ ಎಫ್​ಐಆರ್​ನಲ್ಲಿ ಒಟ್ಟು 21 ಜನರ ಹೆಸರು ಉಲ್ಲೇಖಿಸಿದ್ದು, ಇವರೆಲ್ಲರೂ ಪ್ರಕರಣದಲ್ಲಿ ಶಂಕಿತರು ಎಂದು ಹೇಳಿದೆ. ಪಶ್ಚಿಮಬಂಗಾಳದ (West Bengal) ರಾಮ್‌ಪುರಹತ್‌ನಲ್ಲಿ ಮಾರ್ಚ್ 21ರಂದು ನಡೆದ ಹಿಂಸಾಚಾರ ದೇಶವನ್ನೇ ನಡುಗಿಸಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಬಗ್ಟುಯಿ ಗ್ರಾಮ ನಿವಾಸಿ ಭಡು ಶೇಖ್​ ಎಂಬುವರನ್ನು ಬಾಂಬ್​ ದಾಳಿಯಲ್ಲಿ ಹತ್ಯೆಗೈಯಲಾಗಿತ್ತು. ತೃಣಮೂಲ ಕಾಂಗ್ರೆಸ್​ನ ಪ್ರಬಲ ನಾಯಕರಾಗಿದ್ದ ಅವರ ಹತ್ಯೆಯ ನಂತರ ಕೆರಳಿದ್ದ ಬೆಂಬಲಿಗರು ಕಂಡಕಂಡ ಮನೆಗೆ ಬೆಂಕಿ ಹಚ್ಚಿದ್ದರು. 12ಕ್ಕೂ ಹೆಚ್ಚು ಮನೆಗಳು ಸುಟ್ಟುಕರಕಲಾಗಿದ್ದು, ಇಬ್ಬರು ಮಕ್ಕಳು ಸೇರಿ 8 ಮಂದಿಯ ಸಜೀವ ದಹನವಾಗಿದೆ. ಈ ಎಂಟು ಮಂದಿ ಸಜೀವ ದಹನ ಮಾಡುವುದಕ್ಕೂ ಮೊದಲು ಅವರನ್ನು ಥಳಿಸಲಾಗಿತ್ತು ಎಂಬ ಮಾಹಿತಿ ವಿಧಿವಿಜ್ಞಾನ ತಜ್ಞರ  ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಕೋಲ್ಕತ್ತ ಹೈಕೋರ್ಟ್​, ತನಿಖೆ ಶುರುಮಾಡುವಂತೆ ಸಿಬಿಐಗೆ ಸೂಚಿಸಿತ್ತು. ಅದರ ಅನ್ವಯ ವಿಚಾರಣೆ ಶುರು ಮಾಡಿರುವ ಸಿಬಿಐ, ಪಂಚಾಯಿತಿ ಉಪಾಧ್ಯಕ್ಷ ಭಡು ಶೇಖ್​ ಹತ್ಯೆಗೆ ಪ್ರತೀಕಾರವಾಗಿಯೇ ಈ ಹಿಂಸಾಚಾರ ನಡೆದಿದ್ದು ಪ್ರಾಥಮಿಕ ತನಿಖೆಯಲ್ಲೇ ಸ್ಪಷ್ಟವಾಗಿದೆ ಎಂದು ಹೇಳಿದೆ. ಸುಮಾರು 70-80 ಜನರ ಗುಂಪು ಹೀಗೆ ಮನೆಗಳಿಗೆ ಬೆಂಕಿ ಹಚ್ಚಿದೆ. ಒಳಗೆ ಇರುವವರನ್ನು ಕೊಲ್ಲುವ ಉದ್ದೇಶ ಇಟ್ಟುಕೊಂಡೇ ಈ ಕೃತ್ಯ ನಡೆಸಲಾಗಿದೆ ಎಂದು ಸಿಬಿಐ ಎಫ್​ಐಆರ್​ನಲ್ಲಿ ಉಲ್ಲೇಖಿಸಿದೆ.

ಬಿರ್ಭೂಮ್​​ನಲ್ಲಿ ಹಿಂಸಾಚಾರ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ನೀಡಿ, ಸಜೀವ ದಹನಗೊಂಡ ಎಂಟೂ ಜನರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲ, ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ  50 ಸಾವಿರ ರೂಪಾಯಿ ಹೆಚ್ಚುವರಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಹಾಗೇ, ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾದ ಮನೆಯವರು ಇನ್ನು ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಬೇಕಿದ್ದು, ಅದಕ್ಕಾಗಿ 2 ಲಕ್ಷ ರೂ. ನೀಡಲಾಗುವುದು. ಘಟನೆ ಸಂತ್ರಸ್ತ ಕುಟುಂಬಗಳಲ್ಲಿ ಒಬ್ಬರಿಗೆ ಉದ್ಯೋಗ ನೀಡಲಾಗುವುದು ಎಂದೂ ಘೋಷಿಸಿದ್ದಾರೆ.

ಇದನ್ನೂ ಓದಿ: ಅಂಗವೈಕಲ್ಯವಿದ್ದರೆ ಏನೂ ಸಾಧಿಸಲು ಆಗೋಲ್ಲ ಅನ್ನುವವರ ಮಧ್ಯೆ ಹುಬ್ಬಳ್ಳಿಯ ಸಿದ್ಧಾರ್ಥ ಹೇಗೆ ಸಾಧನೆಯ ಶೀಖವೇರಿದ್ದಾನೆ, ನೋಡಿ!

Published On - 2:46 pm, Sat, 26 March 22

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?