AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Nov 10, 2023 | 10:03 PM

Share

ನವದೆಹಲಿ, ನವೆಂಬರ್ 10: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಶುಕ್ರವಾರ ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು (Fake Job Racket) ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ. ಸರಕಾರಿ ನೌಕರಿ ಕೊಡಿಸುವುದಾಗಿ ಕಳೆದ ಎರಡು ವರ್ಷಗಳಿಂದ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಪಾಟ್ನಾ, ಕರ್ನಾಟಕದ ಮಂಗಳೂರು, ಬೆಂಗಳೂರು ಮತ್ತು ಜಾರ್ಖಂಡ್​​ನ ಧನ್‌ಬಾದ್‌ನ ಒಂಬತ್ತು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ₹ 41 ಕೋಟಿ ಬೆಲೆಯ ಜಮೀನು ₹ 353 ಕೋಟಿಗೆ ಮಾರಾಟ ಮಾಡಿದ ದೆಹಲಿ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ

ಆರೋಪಿಗಳು ಭರವಸೆ ನೀಡಿದ ಸರ್ಕಾರಿ ಉದ್ಯೋಗಗಳಿಗೆ ಆಕಾಂಕ್ಷಿಗಳು 10-15 ಲಕ್ಷ ರೂಪಾಯಿಗಳನ್ನು ನೀಡಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. ದಂಧೆಯ ಆರೋಪಿಗಳು ಅನೇಕ ನಗರಗಳಲ್ಲಿ ಆಕಾಂಕ್ಷಿಗಳಿಗೆ ನಕಲಿ ತರಬೇತಿ ಶಿಬಿರಗಳನ್ನು ನಡೆಸಿದ್ದರು ಮತ್ತು ಇಬ್ಬರು ಪಾಟ್ನಾ ಮತ್ತು ಮುಂಬೈನ ಸಕಿನಾಕಾದಲ್ಲಿ ಕೃತ್ಯ ಎಸಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು