AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಜ್ಯ ನಕಲಿ ಉದ್ಯೋಗ ದಂಧೆ: ಬೆಂಗಳೂರು ಸೇರಿ ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Nov 10, 2023 | 10:03 PM

Share

ನವದೆಹಲಿ, ನವೆಂಬರ್ 10: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಶುಕ್ರವಾರ ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು (Fake Job Racket) ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ. ಸರಕಾರಿ ನೌಕರಿ ಕೊಡಿಸುವುದಾಗಿ ಕಳೆದ ಎರಡು ವರ್ಷಗಳಿಂದ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಪಾಟ್ನಾ, ಕರ್ನಾಟಕದ ಮಂಗಳೂರು, ಬೆಂಗಳೂರು ಮತ್ತು ಜಾರ್ಖಂಡ್​​ನ ಧನ್‌ಬಾದ್‌ನ ಒಂಬತ್ತು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ₹ 41 ಕೋಟಿ ಬೆಲೆಯ ಜಮೀನು ₹ 353 ಕೋಟಿಗೆ ಮಾರಾಟ ಮಾಡಿದ ದೆಹಲಿ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ

ಆರೋಪಿಗಳು ಭರವಸೆ ನೀಡಿದ ಸರ್ಕಾರಿ ಉದ್ಯೋಗಗಳಿಗೆ ಆಕಾಂಕ್ಷಿಗಳು 10-15 ಲಕ್ಷ ರೂಪಾಯಿಗಳನ್ನು ನೀಡಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. ದಂಧೆಯ ಆರೋಪಿಗಳು ಅನೇಕ ನಗರಗಳಲ್ಲಿ ಆಕಾಂಕ್ಷಿಗಳಿಗೆ ನಕಲಿ ತರಬೇತಿ ಶಿಬಿರಗಳನ್ನು ನಡೆಸಿದ್ದರು ಮತ್ತು ಇಬ್ಬರು ಪಾಟ್ನಾ ಮತ್ತು ಮುಂಬೈನ ಸಕಿನಾಕಾದಲ್ಲಿ ಕೃತ್ಯ ಎಸಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ