AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ

ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ
ಕಾಂಗ್ರೆಸ್ ನಾಯಕ ಪಿ.ಚಿದಂಬರಂ
TV9 Web
| Edited By: |

Updated on:May 17, 2022 | 10:01 AM

Share

ದೆಹಲಿ: ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಅವರ ದೆಹಲಿ, ಮುಂಬೈ ಮತ್ತು ಚೆನ್ನೈ ನಿವಾಸಗಳು ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ದಾಳಿಯ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

2010-14ರ ಅವಧಿಯಲ್ಲಿ ಕಾರ್ತಿ ಚಿದಂಬರಂ ಭಾಗಿಯಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ. ಚೀನಾದ 250 ನೌಕರರಿಗೆ ಕಾನೂನುಬಾಹಿರವಾಗಿ ವೀಸಾ ಕಲ್ಪಿಸಲು ಸಹಕರಿಸಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಐಎನ್​ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆಗಸ್ಟ್​ 21, 2019ರಲ್ಲಿ ಪಿ.ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ಟೋಬರ್ 16, 2019ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ 6 ದಿನಗಳ ನಂತರ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು. ಆದರೆ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ತಿಹಾರ್ ಜೈಲಿನಲ್ಲಿ ಕೆಲ ಸಮಯ ಇರಬೇಕಾಯಿತು. ಸುಮಾರು 100 ದಿನಗಳ ನಂತರ, ಅಂದರೆ ಡಿಸೆಂಬರ್ 4, 2019ರಂದು ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ದೊರೆತು, ಜೈಲಿನಿಂದ ಬಿಡುಗಡೆಯಾದರು. ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ಇಡಿ ಸಲ್ಲಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಲು ಸಾಕಷ್ಟು ಪುರಾವೆಗಳಿವೆ ಎಂದು ಇತ್ತೀಚೆಗಷ್ಟೇ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಹಿಂದಿಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:09 am, Tue, 17 May 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!