AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ

ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ
ಕಾಂಗ್ರೆಸ್ ನಾಯಕ ಪಿ.ಚಿದಂಬರಂ
TV9 Web
| Edited By: |

Updated on:May 17, 2022 | 10:01 AM

Share

ದೆಹಲಿ: ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಅವರ ದೆಹಲಿ, ಮುಂಬೈ ಮತ್ತು ಚೆನ್ನೈ ನಿವಾಸಗಳು ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ದಾಳಿಯ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

2010-14ರ ಅವಧಿಯಲ್ಲಿ ಕಾರ್ತಿ ಚಿದಂಬರಂ ಭಾಗಿಯಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ. ಚೀನಾದ 250 ನೌಕರರಿಗೆ ಕಾನೂನುಬಾಹಿರವಾಗಿ ವೀಸಾ ಕಲ್ಪಿಸಲು ಸಹಕರಿಸಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಐಎನ್​ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆಗಸ್ಟ್​ 21, 2019ರಲ್ಲಿ ಪಿ.ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ಟೋಬರ್ 16, 2019ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ 6 ದಿನಗಳ ನಂತರ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು. ಆದರೆ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ತಿಹಾರ್ ಜೈಲಿನಲ್ಲಿ ಕೆಲ ಸಮಯ ಇರಬೇಕಾಯಿತು. ಸುಮಾರು 100 ದಿನಗಳ ನಂತರ, ಅಂದರೆ ಡಿಸೆಂಬರ್ 4, 2019ರಂದು ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ದೊರೆತು, ಜೈಲಿನಿಂದ ಬಿಡುಗಡೆಯಾದರು. ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ಇಡಿ ಸಲ್ಲಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಲು ಸಾಕಷ್ಟು ಪುರಾವೆಗಳಿವೆ ಎಂದು ಇತ್ತೀಚೆಗಷ್ಟೇ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಹಿಂದಿಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:09 am, Tue, 17 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!