AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಜಿಒಗಳಿಗೆ ಎಫ್‌ಸಿಆರ್‌ಎ ಪರವಾನಗಿಗೆ ಅಕ್ರಮ ಅನುಮತಿ ಆರೋಪ; 40 ಸ್ಥಳಗಳಲ್ಲಿ ಸಿಬಿಐ ದಾಳಿ

ಎಫ್‌ಸಿಆರ್‌ಎ ವಿಭಾಗದ ಕೆಲವು ಸಾರ್ವಜನಿಕ ಸೇವಕರು  ಎನ್‌ಜಿಒಗಳೊಂದಿಗೆ ಶಾಮೀಲಾಗಿ, ವಿದೇಶಿ ದಾನಿಗಳಿಂದ ಪಡೆದ ಹಣವನ್ನು ಲಂಚದ ಬದಲಿಗೆ ಸ್ವೀಕರಿಸಲು ಮತ್ತು ಬಳಸಲು ಅನುಮತಿಸುವ ಪರವಾನಗಿಗಳ ಕಾನೂನುಬಾಹಿರ ಕ್ಲಿಯರೆನ್ಸ್‌ಗಳನ್ನು ಸುಗಮಗೊಳಿಸುತ್ತಿದ್ದಾರೆ

ಎನ್‌ಜಿಒಗಳಿಗೆ ಎಫ್‌ಸಿಆರ್‌ಎ ಪರವಾನಗಿಗೆ ಅಕ್ರಮ ಅನುಮತಿ ಆರೋಪ; 40 ಸ್ಥಳಗಳಲ್ಲಿ ಸಿಬಿಐ ದಾಳಿ
ಗೃಹ ಸಚಿವಾಲಯ
TV9 Web
| Edited By: |

Updated on:May 10, 2022 | 9:37 PM

Share

ದೆಹಲಿ: ಲಂಚದ ಬದಲಿಗೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (FCRA) ಪರವಾನಗಿಗಳ “ಅಕ್ರಮ ಅನುಮತಿ” ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ನಡುವಿನ ಒಪ್ಪಂದದ ತನಿಖೆಗೆ ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ಮಹತ್ವದ ಕಾರ್ಯಾಚರಣೆ ನಡೆಸಿದೆ. ದೆಹಲಿ, ಚೆನ್ನೈ, ಮೈಸೂರು, ಕೊಯಮತ್ತೂರು ಮತ್ತು ರಾಜಸ್ಥಾನ ಸೇರಿದಂತೆ ಹಲವು ಸ್ಥಳಗಳಲ್ಲಿ ಸರ್ಕಾರೇತರ ಸಂಸ್ಥೆಗಳ (NGO), ಮಧ್ಯವರ್ತಿಗಳು ಮತ್ತು ಎಂಎಚ್‌ಎ ವಿಭಾಗದ ಎಫ್‌ಸಿಆರ್‌ಎ ವಿಭಾಗದ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕ ಸೇವಕರನ್ನು ಹಿಡಿಯಲು 40 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಎನ್‌ಜಿಒಗಳಿಗೆ ವಿದೇಶಿ ನಿಧಿಯನ್ನು ಪಡೆಯಲು ಪರವಾನಗಿ ನೀಡುವ ಕೇಂದ್ರ ಗೃಹ ಸಚಿವಾಲಯದ ಸುಳಿವು ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್‌ಸಿಆರ್‌ಎ ವಿಭಾಗದ ಕೆಲವು ಸಾರ್ವಜನಿಕ ಸೇವಕರು  ಎನ್‌ಜಿಒಗಳೊಂದಿಗೆ ಶಾಮೀಲಾಗಿ, ವಿದೇಶಿ ದಾನಿಗಳಿಂದ ಪಡೆದ ಹಣವನ್ನು ಲಂಚದ ಬದಲಿಗೆ ಸ್ವೀಕರಿಸಲು ಮತ್ತು ಬಳಸಲು ಅನುಮತಿಸುವ ಪರವಾನಗಿಗಳ ಕಾನೂನುಬಾಹಿರ ಕ್ಲಿಯರೆನ್ಸ್‌ಗಳನ್ನು ಸುಗಮಗೊಳಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ 6 ಅಧಿಕಾರಿಗಳು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಭ್ರಷ್ಟಾಚಾರ-ವಿರೋಧಿ ತನಿಖಾ ಸಂಸ್ಥೆಯು ಎಫ್‌ಸಿಆರ್‌ಎ ಪರವಾನಗಿ ನವೀಕರಣ ಅಥವಾ ಹೊಸ ಅನುದಾನಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ₹2 ಕೋಟಿ ಮೌಲ್ಯದ ಹವಾಲಾ ವಹಿವಾಟುಗಳನ್ನು ಪತ್ತೆ ಮಾಡಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಂಸತ್ತಿನಲ್ಲಿ ಸಚಿವಾಲಯವು ಮಂಡಿಸಿದ ಮಾಹಿತಿಯ ಪ್ರಕಾರ 2020 ರಿಂದ ಕಾನೂನಿನ ನಿಬಂಧನೆಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸದ 466 ಸರ್ಕಾರೇತರ ಸಂಸ್ಥೆಗಳ ವಿದೇಶಿ ನಿಧಿಯ ಪರವಾನಗಿಯನ್ನು ನವೀಕರಿಸಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ. ದೇಶದಲ್ಲಿ 16,895 ಸಂಸ್ಥೆಗಳು ನೋಂದಣಿಯಾಗಿವೆ.

ಗೃಹ ಸಚಿವಾಲಯವು ನವೆಂಬರ್ 2020 ರಲ್ಲಿ ಎಫ್‌ಸಿಆರ್‌ಎ ನಿಯಮಗಳನ್ನು ಬಿಗಿಗೊಳಿಸಿತು. ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕ ಹೊಂದಿಲ್ಲದ ಆದರೆ ಬಂದ್, ಮುಷ್ಕರಗಳು ಅಥವಾ ರಸ್ತೆ ತಡೆಗಳಂತಹ ರಾಜಕೀಯ ಕ್ರಿಯೆಯಲ್ಲಿ ತೊಡಗಿರುವ ಸಂಸ್ಥೆಗಳು ಸಕ್ರಿಯ ರಾಜಕೀಯ ಅಥವಾ ಪಕ್ಷ ರಾಜಕಾರಣದಲ್ಲಿ ಭಾಗವಹಿಸಿದರೆ ರಾಜಕೀಯ ಸ್ವಭಾವದವರೆಂದು ಪರಿಗಣಿಸಲಾಗುತ್ತದೆ. ಈ ನಿಬಂಧನೆಯು ಅಂತಹ ಗುಂಪುಗಳಿಗೆ ವಿದೇಶಿ ಹಣವನ್ನು ಸ್ವೀಕರಿಸುವುದನ್ನು ನಿರ್ಬಂಧಿಸುತ್ತದೆ. ಈ ವರ್ಗದ ಅಡಿಯಲ್ಲಿ ಒಳಗೊಂಡಿರುವ ಸಂಸ್ಥೆಗಳಲ್ಲಿ ರೈತ ಸಂಘಟನೆಗಳು, ವಿದ್ಯಾರ್ಥಿಗಳು, ಕಾರ್ಮಿಕರ ಸಂಘಟನೆಗಳು ಮತ್ತು ಜಾತಿ ಆಧಾರಿತ ಸಂಘಟನೆಗಳು ಸೇರಿವೆ.

ಇದನ್ನೂ ಓದಿ
Image
ವಿದೇಶಿ ದೇಣಿಗೆ ಸಂಗ್ರಹ: ಎನ್‌ಜಿಒಗಳ ರದ್ದಾದ ಎಫ್‌ಸಿಆರ್‌ಎ ಪರವಾನಗಿ ನವೀಕರಿಸುವ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಎಫ್‌ಸಿಆರ್‌ಎಗೆ ಸೆಪ್ಟೆಂಬರ್ 2020 ರಲ್ಲಿ ಕಾನೂನನ್ನು ತಿದ್ದುಪಡಿ ಮಾಡಲಾಯಿತು. ಇದು ಸರ್ಕಾರವು ಸಾರ್ವಜನಿಕ ಸೇವಕರು ವಿದೇಶಿ ಹಣವನ್ನು ಪಡೆಯುವುದನ್ನು ನಿರ್ಬಂಧಿಸಿತು ಮತ್ತು ಎನ್‌ಜಿಒದ ಪ್ರತಿಯೊಬ್ಬ ಪದಾಧಿಕಾರಿಗಳಿಗೂ ಆಧಾರ್ ಅನ್ನು ಕಡ್ಡಾಯಗೊಳಿಸಿತು. ಹೊಸ ನಿಬಂಧನೆಗಳ ಪ್ರಕಾರ ವಿದೇಶಿ ಹಣವನ್ನು ಸ್ವೀಕರಿಸುವ ಸಂಸ್ಥೆಗಳು ಅಂತಹ ನಿಧಿಯ ಶೇ20 ಕ್ಕಿಂತ ಹೆಚ್ಚು ಆಡಳಿತಾತ್ಮಕ ಉದ್ದೇಶಗಳಿಗಾಗಿ ಬಳಸಲು ಸಾಧ್ಯವಾಗುವುದಿಲ್ಲ ಎಂದು ಷರತ್ತು ವಿಧಿಸುತ್ತದೆ. ಈ ಮಿತಿಯು ಮೊದಲು ಶೇ 50 ಆಗಿತ್ತು.

Published On - 9:22 pm, Tue, 10 May 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?