AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI Probe: ಒಡಿಶಾ ರೈಲು ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು- ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

Odisha Train Accident: ಶುಕ್ರವಾರ ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

CBI Probe: ಒಡಿಶಾ ರೈಲು ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು- ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ
ಒಡಿಶಾ ರೈಲು ದುರಂತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 04, 2023 | 7:31 PM

Share

ನವದೆಹಲಿ: ಜೂನ್ 2, ಶುಕ್ರವಾರ ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ‘ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡಲು ರೈಲ್ವೆ ನಿರ್ದರಿಸಿದೆ’ ಎಂದು ಸಚಿವ ವೈಷ್ಣವ್ ಅವರು ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಪರಿಗಣಿಸಲಾಗಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹಂಗ ಬಜಾರ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್​ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಅಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 12 ಬೋಗಿಗಳು ಹಳಿ ತಪ್ಪಿ ಪಕ್ಕದ ಟ್ರ್ಯಾಕ್​ಗೆ ಉರುಳಿವೆ. ಅತ್ತ, ಯಶವಂತಪುರದಿಂದ ಹೌರಾಗೆ ಹೋಗುತ್ತಿದ್ದ ಇನ್ನೊಂದು ರೈಲು ಈ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಎರಡು ಪ್ಯಾಸೆಂಜರ್ ರೈಲುಗಳಿಗೆ ಬಹಳ ಹಾನಿಯಾಗಿದೆ.

ಇದನ್ನೂ ಓದಿ: Electronic Interlocking: ರೈಲುದುರಂತಕ್ಕೆ ಕಾರಣವಾದ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಎಂದರೇನು? ಇದು ಹೇಗೆ ಕೆಲಸ ಮಾಡುತ್ತದೆ?

ದುರಂತ ಸಂಭವಿಸಿದ ಕೂಡಲೇ ರಕ್ಷಣಾ ತಂಡಗಳು ಕ್ಷಿಪ್ರವಾಗಿ ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ನೂರಾರು ಜೀವಗಳನ್ನು ಉಳಿಸಿದ್ದಾರೆ. ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ ಹಾಗೂ ಹಲವು ರೈಲ್ವೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸಿದ್ದು ಗಮನ ಸೆಳೆಯಿತು. ಘಟನಾ ಸ್ಥಳದಲ್ಲಿ ಬಹುತೇಕ ಎಲ್ಲವನ್ನೂ ತೆರವುಗೊಳಿಸಿ ಆದಷ್ಟೂ ಬೇಗ ಸಂಚಾರಕ್ಕೆ ಟ್ರ್ಯಾಕ್​ಗಳನ್ನು ಅನುವು ಮಾಡಿಕೊಡುವತ್ತ ಗಮನ ಕೊಡಲಾಗುತ್ತಿದೆ.

ಇದೇ ವೇಳೆ, ತಪ್ಪಾದ ಸಿಗ್ನಲ್ ಕಾರಣದಿಂದ ರೈಲು ಅಪಘಾತವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂನ ಪ್ರಕ್ರಿಯೆಯಲ್ಲಿ ಆದ ಬದಲಾವಣೆ ಕಾರಣ ಎಂಬುದು ಗೊತ್ತಾಗಿದೆ ಎಂದು ರೈಲ್ವೆ ಸಚಿವ ವೈಷ್ಣವ್ ಹೇಳಿದ್ದರು. ಇದೀಗ ಸಿಬಿಐ ತನಿಖೆಯಾದಲ್ಲಿ ಇನ್ನಷ್ಟು ವಿಚಾರಗಳು ಮತ್ತು ಲೋಪದೋಷಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Sun, 4 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ