Manish Sisodia: ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ಮನೀಷ್ ಸಿಸೋಡಿಯಾ ವಿರುದ್ಧ ಬೇಹುಗಾರಿಕೆ ಪ್ರಕರಣ ದಾಖಲಿಸಿದ ಸಿಬಿಐ

ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

Manish Sisodia: ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ಮನೀಷ್ ಸಿಸೋಡಿಯಾ ವಿರುದ್ಧ ಬೇಹುಗಾರಿಕೆ ಪ್ರಕರಣ ದಾಖಲಿಸಿದ ಸಿಬಿಐ
ಮನೀಶ್ ಸಿಸೋಡಿಯಾ

Updated on: Mar 16, 2023 | 1:02 PM

ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧ ಸಿಬಿಐ ಬೇಹುಗಾರಿಕೆ ಪ್ರಕರಣ ದಾಖಲಿಸಿದೆ. ಸಿಸೋಡಿಯಾ ಸೇರಿದಂತೆ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಬೇಹುಗಾರಿಕೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಸಿಸೋಡಿಯಾ ವಿರುದ್ಧ ಕ್ರಿಮಿನಲ್ ಪಿತೂರಿ, ಅಪ್ರಾಮಾಣಿಕವಾಗಿ ಆಸ್ತಿ ದುರ್ಬಳಕೆ, ವಂಚನೆ ಮತ್ತು ಭ್ರಷ್ಟಾಚಾರದ ಆರೋಪ ಹೊರಿಸಲಾಗಿದೆ.

ತನಿಖಾ ಸಂಸ್ಥೆಯು ದೆಹಲಿ ಸರ್ಕಾರದ ಫೀಡ್​ಬ್ಯಾಕ್​ ಯುನಿಟ್​ನಿಂದ ಸಾಕಷ್ಟು ಮಂದಿ ಬೇಹುಗಾರಿಕೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಸಿಸೋಡಿಯಾ ಹೊರತಾಗಿ, ಪ್ರಕರಣ ದಾಖಲಿಸಿರುವ ಇತರ 5 ಜನರಲ್ಲಿ ಆಗಿನ ವಿಜಿಲೆನ್ಸ್ ಕಾರ್ಯದರ್ಶಿ ಸುಕೇಶ್ ಕುಮಾರ್ ಜೈನ್, ನಿವೃತ್ತ ಡಿಐಜಿ, ಸಿಐಎಸ್‌ಎಫ್ ಮತ್ತು ಸಿಎಂ ಮತ್ತು ಜಂಟಿ ನಿರ್ದೇಶಕ ಪ್ರತಿಕ್ರಿಯೆ ಘಟಕದ ವಿಶೇಷ ಸಲಹೆಗಾರ, ನಿವೃತ್ತ ಜಂಟಿ ಉಪ ನಿರ್ದೇಶಕ ಪ್ರದೀಪ್ ಕುಮಾರ್ ಪುಂಜ್ (ಉಪ ನಿರ್ದೇಶಕ ಎಫ್‌ಬಿಯು), ನಿವೃತ್ತ ಸಹಾಯಕ ಕಮಾಂಡೆಂಟ್ ಸಿಐಎಸ್ಎಫ್ ಸತೀಶ್ ಖೇತ್ರಪಾಲ್ (ಫೀಡ್ ಬ್ಯಾಕ್ ಆಫೀಸರ್), ಗೋಪಾಲ್ ಮೋಹನ್ (ದೆಹಲಿ ಸಿಎಂಗೆ ಸಲಹೆಗಾರ) ಮತ್ತು ಇನ್ನೊಂದು ಹೆಸರನ್ನು ಸೇರಿಸಲಾಗಿದೆ.

ಈ ಎಫ್​ಐಆರ್​ನಲ್ಲಿ ಮನೀಷ್​ ಸಿಸೋಡಿಯಾರನ್ನು ಪ್ರಮುಖ ಆರೋಪಿ ಎಂದು ಪರಿಗಣಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:49 pm, Thu, 16 March 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us