AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಲಾಲು ಪ್ರಸಾದ್ ಯಾದವ್ ವಿರುದ್ಧದ ತನಿಖೆ ಪುನರಾರಂಭಿಸಿದ ಸಿಬಿಐ

ರೈಲ್ವೆ ಯೋಜನೆಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆಯನ್ನು ಪುನರಾರಂಭಿಸಿದೆ.

ರೈಲ್ವೆ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಲಾಲು ಪ್ರಸಾದ್ ಯಾದವ್ ವಿರುದ್ಧದ ತನಿಖೆ ಪುನರಾರಂಭಿಸಿದ ಸಿಬಿಐ
ಲಾಲು ಪ್ರಸಾದ್‌ ಯಾದವ್‌Image Credit source: NDTV
TV9 Web
| Edited By: |

Updated on: Dec 26, 2022 | 10:44 AM

Share

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಅವರ ಪಕ್ಷ ನಿತೀಶ್‌ ಕುಮಾರ್‌ ಅವರ ಜನತಾ ದಳ ಯುನೈಟೆಡ್‌ (JDU) ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಸಿಬಿಐ (CBI) ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮತ್ತೆ ತೆರೆದಿದೆ. ರೈಲ್ವೆ ಯೋಜನೆಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆಯನ್ನು ಪುನರಾರಂಭಿಸಿದೆ.

ಇದನ್ನು ‘ರಾಜಕೀಯ ಷಡ್ಯಂತ್ರ’ ಎಂದು ಕರೆಯಲಾಗುತ್ತಿದ್ದು, ಬಿಹಾರದಲ್ಲಿ ಸರ್ಕಾರ ರಚಿಸುವ ಸಲುವಾಗಿ ಬಿಹಾರದ ಮಾಜಿ ಮುಖ್ಯಮಂತ್ರಿ ಪಕ್ಷವು ನಿತೀಶ್ ಕುಮಾರ್ ಅವರ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡ ಕೆಲವೇ ತಿಂಗಳ ನಂತರ ಈ ಬೆಳವಣಿಗೆ ಕಂಡುಬಂದಿದೆ.

ಇದನ್ನೂ ಓದಿ: Breaking News: ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು ಪ್ರಸಾದ್ ಯಾದವ್ ಸೇರಿ 15 ಜನರ ವಿರುದ್ಧ ಸಿಬಿಐ ಚಾರ್ಜ್​ಶೀಟ್ ಸಲ್ಲಿಕೆ

ಲಾಲು ಪ್ರಸಾದ್ ಯಾದವ್ ಅವರು ಯುಪಿಎ-1 ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದ್ದರು. 2018ರಲ್ಲಿ ಈ ವಿಷಯದ ಆರಂಭಿಕ ತನಿಖೆ ಪ್ರಾರಂಭವಾಗಿತ್ತು. ಮೇ 2021ರಲ್ಲಿ ಈ ಪ್ರಕರಣದ ತನಿಖೆಯನ್ನು ಮುಚ್ಚಲಾಗಿತ್ತು.

ಇದನ್ನೂ ಓದಿ: Lalu Prasad Yadav: ಕಿಡ್ನಿ ಕಸಿಗೆ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್

ವರದಿಗಳ ಪ್ರಕಾರ, ಸಿಬಿಐ ಲಾಲು ಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಪುತ್ರಿಯರಾದ ಚಂದಾ ಯಾದವ್ ಮತ್ತು ರಾಗಿಣಿ ಯಾದವ್ ಅವರನ್ನು ಈ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಿದೆ. ಮುಂಬೈನ ಬಾಂದ್ರಾದಲ್ಲಿ ರೈಲು ಭೂಮಿ ಗುತ್ತಿಗೆ ಯೋಜನೆಗಳು ಮತ್ತು ನವದೆಹಲಿ ರೈಲು ನಿಲ್ದಾಣದ ನವೀಕರಣದಲ್ಲಿ ಆಸಕ್ತಿ ಹೊಂದಿದ್ದ ಡಿಎಲ್‌ಎಫ್ ಗ್ರೂಪ್‌ನಿಂದ ಲಾಲು ಪ್ರಸಾದ್ ಯಾದವ್ ದಕ್ಷಿಣ ದೆಹಲಿಯ ಆಸ್ತಿಯನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಪ್ರಕರಣ ಇದೀಗ ಮತ್ತೆ ರೀಓಪನ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ