AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ

ನಾವು ಘೋಷ್ ಅವರ ಉತ್ತರಗಳನ್ನು ಮತ್ತಷ್ಟು ಪರಿಶೀಲಿಸಲು ಬಯಸುತ್ತೇವೆ, ಏಕೆಂದರೆ ನಮ್ಮ ಕೆಲವು ಪ್ರಶ್ನೆಗಳಿಗೆ ಉತ್ತರಗಳಲ್ಲಿ ವ್ಯತ್ಯಾಸಗಳಿವೆ. ಆದ್ದರಿಂದ, ನಾವು ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸುವ ಆಯ್ಕೆಯ ಬಗ್ಗೆ ಯೋಚಿಸುತ್ತಿದ್ದೇವೆ" ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ
ಸಿಬಿಐ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 22, 2024 | 7:16 PM

Share

ಕೋಲ್ಕತ್ತಾ ಆಗಸ್ಟ್ 22: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ (RG Kar Medical College and Hospital) ಸಂಬಂಧಿಸಿದಂತೆ, ಪ್ರಸ್ತುತ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಮತ್ತು ಇತರ ನಾಲ್ವರನ್ನು ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕೇಂದ್ರೀಯ ತನಿಖಾ ದಳ (CBI) ಕೋಲ್ಕತ್ತಾ ನ್ಯಾಯಾಲಯದ ಅನುಮತಿ ಕೋರಿದೆ. ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕಳೆದ ವಾರ ಕೋಲ್ಕತ್ತಾ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಸಿಬಿಐ, ಘೋಷ್ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದೆ. ವಿಚಾರಣೆಯ ಸಮಯದಲ್ಲಿ ಘೋಷ್ ಅವರ ಪ್ರತಿಕ್ರಿಯೆಗಳಲ್ಲಿ ಅಸಮಂಜಸತೆ ಕಂಡುಬಂದ ಕಾರಣ ಸಂಸ್ಥೆಯು ಈಗ ಪಾಲಿಗ್ರಾಫ್ ಪರೀಕ್ಷೆಯನ್ನು ಪರಿಗಣಿಸುತ್ತಿದೆ.

“ನಾವು ಘೋಷ್ ಅವರ ಉತ್ತರಗಳನ್ನು ಮತ್ತಷ್ಟು ಪರಿಶೀಲಿಸಲು ಬಯಸುತ್ತೇವೆ, ಏಕೆಂದರೆ ನಮ್ಮ ಕೆಲವು ಪ್ರಶ್ನೆಗಳಿಗೆ ಉತ್ತರಗಳಲ್ಲಿ ವ್ಯತ್ಯಾಸಗಳಿವೆ. ಆದ್ದರಿಂದ, ನಾವು ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸುವ ಆಯ್ಕೆಯ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ತೀವ್ರ ಗಾಯದ ಗುರುತುಗಳೊಂದಿಗೆ ಶವ ಪತ್ತೆಯಾಗಿದ್ದು, ಆ ಪ್ರಕರಣವನ್ನು ಖಂಡಿಸಿ ವೈದ್ಯರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ್ದಾರೆ.  ವೈದ್ಯೆಯ ಸಾವಿನ ಸುದ್ದಿ ತಿಳಿದ ನಂತರ ಘೋಷ್ ಅವರ ನಿರ್ದಿಷ್ಟ ಪಾತ್ರದ ಬಗ್ಗೆ ಸಿಬಿಐ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಆಕೆಯ ಶವವನ್ನು ನೋಡುವ ಮೊದಲು ಪೋಷಕರನ್ನು ಸುಮಾರು ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದೇಕೆ ಎಂದು ಸಿಬಿಐ ಪ್ರಶ್ನಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಪಿಟಿಐ ವರದಿಯ ಪ್ರಕಾರ, ಘಟನೆಯ ಸ್ವಲ್ಪ ಸಮಯದ ನಂತರ ಸೆಮಿನಾರ್ ಹಾಲ್‌ನ ಪಕ್ಕದ ಕೊಠಡಿಗಳ ನವೀಕರಣದ ಬಗ್ಗೆಯೂ ಘೋಷ್ ಅವರನ್ನು ಪ್ರಶ್ನಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನ್ನು ಪಾಲಿಗ್ರಾಫ್ ಪರೀಕ್ಷೆ ನಡೆಸಲು ಸಿಬಿಐ ಈಗಾಗಲೇ ನ್ಯಾಯಾಲಯದ ಅನುಮತಿ ಪಡೆದುಕೊಂಡಿದೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣ: ಸಾಮಾಜಿಕ ಮಾಧ್ಯಮದಲ್ಲಿನ ವಾದ ಇಲ್ಲಿ ಬೇಡ ಎಂದ ಸಿಜೆಐ

ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಫೆಡರಲ್ ಏಜೆನ್ಸಿಯು ಕಳೆದ ವಾರ ಕೋಲ್ಕತ್ತಾ ಪೊಲೀಸರಿಂದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆಯ ತನಿಖೆಯನ್ನು ವಹಿಸಿಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ