AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ; ಮಾಜಿ ಸಚಿವನಿಗೆ ಶುರುವಾಗಲಿದೆ ಸಿಬಿಐ ಸಂಕಷ್ಟ !

ನವೆಂಬರ್​ 12ರವರೆಗೂ ಇ.ಡಿ.ಅಧಿಕಾರಿಗಳು ಅನಿಲ್​ ದೇಶ್​ಮುಖ್​​ರನ್ನು ವಿಚಾರಣೆ ನಡೆಸಬಹುದು ಎಂದು ಬಾಂಬೆ ಹೈಕೋರ್ಟ್​ ನಿರ್ದೇಶನ ನೀಡಿದೆ.

ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ; ಮಾಜಿ ಸಚಿವನಿಗೆ ಶುರುವಾಗಲಿದೆ ಸಿಬಿಐ ಸಂಕಷ್ಟ !
ಅನಿಲ್​ ದೇಶ್​ಮುಖ್​​
TV9 Web
| Updated By: Lakshmi Hegde|

Updated on: Nov 07, 2021 | 2:08 PM

Share

ದೆಹಲಿ: ಅಕ್ರಮ ಹಣವರ್ಗಾವಣೆ ಪ್ರಕರಣದಡಿ ಈಗಾಗಲೇ ಇ.ಡಿ.ಯಿಂದ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್ (Anil Deshmukh)​​ರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಕೂಡ ಮನವಿ ಮಾಡಿದೆ.  ಮೊನ್ನೆ ಅನಿಲ್​ ದೇಶ್​ಮುಖ್​​ರನ್ನು ಬಂಧಿಸಿದ್ದ ಇ.ಡಿ.ಅಧಿಕಾರಿಗಳು ಅವರನ್ನು ಮುಂಬೈ ಕೋರ್ಟ್​ಗೆ ಹಾಜರುಪಡಿಸಿದ್ದರು. ಹಾಗೇ, ಇನ್ನೂ 9 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಕೋರ್ಟ್​ ಅನಿಲ್​ ದೇಶ್​​ಮುಖ್​ರನ್ನು ಜೈಲಿಗೆ ಕಳಿಸಿತ್ತು. 

ಇನ್ನು ತಮ್ಮ ಮನವಿಯನ್ನು ಪುರಸ್ಕರಿಸದ ಸೆಷನ್ಸ್​ ಕೋರ್ಟ್​​ ತೀರ್ಪಿನ ವಿರುದ್ಧ ಇ.ಡಿ.ಅಧಿಕಾರಿಗಳು ಕೂಡ ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ನವೆಂಬರ್​ 12ರವರೆಗೂ ಇ.ಡಿ.ಅಧಿಕಾರಿಗಳು ಅನಿಲ್​ ದೇಶ್​ಮುಖ್​​ರನ್ನು ವಿಚಾರಣೆ ನಡೆಸಬಹುದು ಎಂದೂ ಹೇಳಿದೆ.  ಇನ್ನು ಅನಿಲ್​ ದೇಶ್​ಮುಖ್​ ಅವರನ್ನು ಇ.ಡಿ.ಅಧಿಕಾರಿಗಳು ವಿಚಾರಣೆ ಮಾಡಿ ಮುಗಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂದರೆ ಅನಿಲ್​ ದೇಶ್​​ಮುಖ್​​ರನ್ನು ಕಸ್ಟಡಿಗೆ ಕೊಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಮನವಿ ಸಲ್ಲಿಸಲಿದ್ದಾರೆ. ನ್ಯಾಯಾಲಯ ಅನುಮತಿ ನೀಡಿದರೆ,  ದೇಶಮುಖ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪ ಮತ್ತು ಪೊಲೀಸ್​ ಅಧಿಕಾರಿಗಳ ವರ್ಗಾವಣೆಯಲ್ಲಿ ನಡೆಸಿದ್ದಾರೆ ಎನ್ನಲಾದ ಅಕ್ರಮದ ಬಗ್ಗೆ ಸಿಬಿಐ ಅವರನ್ನು ಪ್ರಶ್ನಿಸಲಿದೆ.

ಅನಿಲ್​ ದೇಶ್​​ಮುಖ್​ ವಿರುದ್ಧ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದಾರೆ. ಈ ಹಿಂದಿನ ಪೊಲೀಸ್ ಅಧಿಕಾರಿ ಸಚಿನ್​ ವಾಜ್​​ರನ್ನು ಬಳಸಿಕೊಂಡು  ಬಾರ್​ ಆ್ಯಂಡ್​ ರೆಸ್ಟೋರೆಂಟ್​, ಹೋಟೆಲ್​ಗಳ  ಮೂಲಕ 100 ಕೋಟಿ ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ಪರಮ್​ ಬೀರ್​ ಸಿಂಗ್​​ ಪತ್ರ ಬರೆದು ಉದ್ಧವ್​ ಠಾಕ್ರೆಗೆ ತಿಳಿಸಿದ್ದರು. ಅದಾದ ಮೇಲೆ ಅನಿಲ್​ ದೇಶ್​ಮುಖ್​ ಮೇಲಿನ ಆರೋಪಗಳೆಲ್ಲ ಮುನ್ನೆಲೆಗೆ ಬಂದು, ಇ.ಡಿ. ಮತ್ತು ಸಿಬಿಐ ಎರಡೂ ತನಿಖಾ ದಳಗಳೂ ಪ್ರಕರಣ ದಾಖಲು ಮಾಡಿವೆ. ಅನಿಲ್​ ದೇಶ್​ಮುಖ್​ ವಿರುದ್ಧ ಮಾಡಲಾದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ನಡೆಸಲಾದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮಾರ್ಚ್​ನಲ್ಲಿಯೇ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.  ಇನ್ನು ಇ.ಡಿ. ವಿಚಾರಣೆಗೆ ಅವರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: Puneeth Rajkumar: ನಮ್ಮ ಸಿನಿಮಾಗೆ ಪುನೀತ್ ಸರ್ ಹಾಡಬೇಕಿತ್ತು; ವಿಕ್ರಮ್ ರವಿಚಂದ್ರನ್ ಭಾವುಕ ಮಾತು

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!