AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ: ಸಿಬಿಐ ನಿರ್ದೇಶಕ

ಕೊವಿಡ್-19ಸೋಂಕು ತಗುಲದಂತೆ ಎಚ್ಚರವಾಗಿರಬೇಕಲ್ಲದೆ, ಎಲ್ಲ ಸುರಕ್ಷತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಸಿಬಿಐ ನಿರ್ದೇಶಕ ರಿಷಿಕುಮಾರ್ ಶುಕ್ಲಾ ತಮ್ಮ ಅಧಿಕಾರಿಗಳಿಗೆ ತಾಕೀತು ಮಾಡಿದರು. ದೇಶದೆಲ್ಲೆಡೆ ಇರುವ ಸಿಬಿಐ ಕಚೇರಿಗಳನ್ನು ಆಗಿಂದಾಗ್ಗೆ ಸ್ಯಾನಿಟೈಸ್ ಮಾಡುತ್ತಿರಬೇಕು ಮತ್ತು ಅಧಿಕಾರಿಗಳೆಲ್ಲ ಅಗಾಗ ಕೊವಿಡ್-19 ಪರೀಕ್ಷಣೆಗೆ ಒಳಗಾಗಬೇಕು ಎಂಬ ಸಲಹೆಯನ್ನೂ ಅವರು ನೀಡಿದರು.

2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ: ಸಿಬಿಐ ನಿರ್ದೇಶಕ
ಸಿಬಿಐ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 01, 2021 | 11:12 PM

Share

ದೆಹಲಿ: ಹೊಸ ವರ್ಷಾಚರಣೆಯ ಅಂಗವಾಗಿ ಕೇಂದ್ರ ತನಿಖಾ ದಳದ (ಸಿಬಿಐ)ಎಲ್ಲ ಅಧಿಕಾರಿಗಳನ್ನು ವರ್ಚ್ಯುಯಲ್ ಸಭೆಯೊಂದರ ಮೂಲಕ ಅಭಿನಂದಿಸಿ ಇಂದು ಮಾತಾಡಿದ ಸಂಸ್ಥೆಯ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಅವರು ಕೊವಿಡ್-19 ಪಿಡುಗಿನ ಉಪಟಳದ ಹೊರತಾಗಿಯೂ 2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದ ಅಧಿಕಾರಿಗಳ ಶ್ರಮವನ್ನು ಕೊಂಡಾಡಿದರು.

‘‘ಮಹಾಮಾರಿ ಮತ್ತು ಲಾಕ್​ಡೌನ್​ಗಳು ನಮಗೆ ಸವಾಲಾಗಿ ಎದುರಾದವು. ಸುರಕ್ಷತಾ ಕ್ರಮಗಳನ್ನು ಅನುಸರಿಸಿದಾಗ್ಯೂ ನಮ್ಮ ಕೆಲವು ಅಧಿಕಾರಿಗಳು ಈ ಭೀಕರ ವ್ಯಾಧಿಗೆ ಬಲಿಯಾದರು. ಅವರ ಕುಟುಂಬಗಳೊಂದಿಗೆ ನಾವು ಯಾವತ್ತೂ ಇರುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಸವಲತ್ತುಗಳನ್ನು ನಮ್ಮ ಸಂಸ್ಥೆ ಒದಗಿಸುತ್ತದೆ ಎಂಬ ಭರವಸೆಯನ್ನು ನಾನು ನೀಡುತ್ತೇನೆ,’’ ಎಂದು ಶುಕ್ಲಾ ಹೇಳಿದರು.

ಸೋಂಕು ತಗುಲದಂತೆ ಎಚ್ಚರವಾಗರಬೇಕಲ್ಲದೆ, ಎಲ್ಲ ಸುರಕ್ಷತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಅವರು ತಮ್ಮ ಅಧಿಕಾರಿಗಳಿಗೆ ತಾಕೀತು ಮಾಡಿದರು. ದೇಶದೆಲ್ಲೆಡೆ ಇರುವ ಸಿಬಿಐ ಕಚೇರಿಗಳನ್ನು ಆಗಿಂದಾಗ್ಗೆ ಸ್ಯಾನಿಟೈಸ್ ಮಾಡುತ್ತಿರಬೇಕು ಮತ್ತು ಅಧಿಕಾರಿಗಳೆಲ್ಲ ಅಗಾಗ ಕೊವಿಡ್-19 ಪರೀಕ್ಷಣೆಗೆ ಒಳಗಾಗಬೇಕು ಎಂದು ರಿಷಿ ಕುಮಾರ್ ಶುಕ್ಲಾ ಹೇಳಿದರು.

ಸಿಬಿಐ ಕೇಂದ್ರ ಕಚೇರಿ

‘ನಿಮ್ಮೆಲ್ಲರ ಶ್ರಮ ಮತ್ತು ಭಗೀರಥ ಪ್ರಯತ್ನಗಳಿಂದಾಗಿ ನಾವು ಕಳೆದ ವರ್ಷ ಬಹಳಷ್ಟು ಕೇಸುಗಳನ್ನು ಇತ್ಯರ್ಥಗೊಳಿಸಿ ನಮ್ಮ ಟಾರ್ಗೆಟ್ ತಲುಪಿದೆವು. ಮುಂಬರುವ ದಿನಗಳಲ್ಲಿ ನಾವು ಇನ್ನಷ್ಟು ಶ್ರಮವಹಿಸಿ ಕೆಲಸ ಮಾಡಬೇಕಿದೆ,’ ಎಂದು ಶುಕ್ಲಾ ಹೇಳಿದರು.

ಕೇರಳದ ಆತ್ಯಂತ ಕ್ಲಿಷ್ಟ ಪ್ರಕರಣವನ್ನು ಉಲ್ಲೇಖಿಸಿದ ಅವರು ಹಲವಾರು ಅಡೆತಡೆಗಳ ಹೊರತಾಗಿಯೂ ಅದನ್ನು ಇತ್ಯರ್ಥಗೊಳಿಸಿದ ಆಧಿಕಾರಿಗಳನ್ನು ಶ್ಲಾಘಿಸಿದರು.

ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅಧಿಕಾರಿಗಳು ಲಭ್ಯವಿರುವ ಆಧುನಿಕ ತಂತ್ರಜ್ಞಾನವನ್ನು ಬಳಸಲು ಪ್ರಾವೀಣ್ಯತೆ ಹೊಂದಬೇಕಿರುವ ಅಗತ್ಯಕ್ಕೆ ಒತ್ತು ನೀಡಿದ ಶುಕ್ಲಾ, ಕೊವಿಡ್-19 ಮಹಾಮಾರಿಯಿಂದಾಗಿ ಈಗ ಆನ್​ಲೈನ್ ಮತ್ತು ವರ್ಚ್ಯುಯಲ್ ಮೂಲಕ ಅನೇಕ ತರಬೇತಿಗಳು ಲಭ್ಯವಿದ್ದು ಅಧಿಕಾರಿ್ಳು ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದರು. ಮೇಲ್ವಿಚಾರಣೆ ವರ್ಗದ ಅಧಿಕಾರಿಗಳು ತನಿಖೆಯಲ್ಲಿ ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳಲು ಹೊಸ ವರ್ಷದ ರೆಸ್ಯೂಲೂಷನ್ ಮಾಡಿಕೊಳ್ಳಬೇಕೆಂದು ಶುಕ್ಲಾ ಸಲಹೆ ನೀಡಿದರು.

ಸಿಬಿಐಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳುವ ಭರವಸೆಯನ್ನೂ ನೀಡಿದ ಶುಕ್ಲಾ ಅವರು, ಬ್ಯಾಂಕುಗಳಲ್ಲಿ ನಡೆಯುತ್ತಿರುವ ಭಾರಿ ಪ್ರಮಾಣದ ವಂಚನೆಗಳು ಸಿಬಿಐ ಎದುರಿರುವ ಹೊಸ ಸವಾಲುಗಳಾಗಿವೆ ಎಂದು ಹೇಳಿ ತಮ್ಮ ಮಾತು ಮುಗಿಸಿದರು.

ಸಭೆಯಲ್ಲಿ ರಿಷಿಕುಮಾರ್ ಶುಕ್ಲಾ ಅವರೊಂದಿಗೆ ಸಿಬಿಐನ ಹೆಚ್ಚುವರಿ ನಿರ್ದೇಶಕರು ಮತ್ತು ಇತರ ಕೆಲ ಅಧಿಕಾರಿಗಳಿದ್ದರು.

Published On - 10:16 pm, Fri, 1 January 21

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್