AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ: ಸಿಬಿಐ ನಿರ್ದೇಶಕ

ಕೊವಿಡ್-19ಸೋಂಕು ತಗುಲದಂತೆ ಎಚ್ಚರವಾಗಿರಬೇಕಲ್ಲದೆ, ಎಲ್ಲ ಸುರಕ್ಷತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಸಿಬಿಐ ನಿರ್ದೇಶಕ ರಿಷಿಕುಮಾರ್ ಶುಕ್ಲಾ ತಮ್ಮ ಅಧಿಕಾರಿಗಳಿಗೆ ತಾಕೀತು ಮಾಡಿದರು. ದೇಶದೆಲ್ಲೆಡೆ ಇರುವ ಸಿಬಿಐ ಕಚೇರಿಗಳನ್ನು ಆಗಿಂದಾಗ್ಗೆ ಸ್ಯಾನಿಟೈಸ್ ಮಾಡುತ್ತಿರಬೇಕು ಮತ್ತು ಅಧಿಕಾರಿಗಳೆಲ್ಲ ಅಗಾಗ ಕೊವಿಡ್-19 ಪರೀಕ್ಷಣೆಗೆ ಒಳಗಾಗಬೇಕು ಎಂಬ ಸಲಹೆಯನ್ನೂ ಅವರು ನೀಡಿದರು.

2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ: ಸಿಬಿಐ ನಿರ್ದೇಶಕ
ಸಿಬಿಐ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 01, 2021 | 11:12 PM

Share

ದೆಹಲಿ: ಹೊಸ ವರ್ಷಾಚರಣೆಯ ಅಂಗವಾಗಿ ಕೇಂದ್ರ ತನಿಖಾ ದಳದ (ಸಿಬಿಐ)ಎಲ್ಲ ಅಧಿಕಾರಿಗಳನ್ನು ವರ್ಚ್ಯುಯಲ್ ಸಭೆಯೊಂದರ ಮೂಲಕ ಅಭಿನಂದಿಸಿ ಇಂದು ಮಾತಾಡಿದ ಸಂಸ್ಥೆಯ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಅವರು ಕೊವಿಡ್-19 ಪಿಡುಗಿನ ಉಪಟಳದ ಹೊರತಾಗಿಯೂ 2020ರಲ್ಲಿ 800ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದ ಅಧಿಕಾರಿಗಳ ಶ್ರಮವನ್ನು ಕೊಂಡಾಡಿದರು.

‘‘ಮಹಾಮಾರಿ ಮತ್ತು ಲಾಕ್​ಡೌನ್​ಗಳು ನಮಗೆ ಸವಾಲಾಗಿ ಎದುರಾದವು. ಸುರಕ್ಷತಾ ಕ್ರಮಗಳನ್ನು ಅನುಸರಿಸಿದಾಗ್ಯೂ ನಮ್ಮ ಕೆಲವು ಅಧಿಕಾರಿಗಳು ಈ ಭೀಕರ ವ್ಯಾಧಿಗೆ ಬಲಿಯಾದರು. ಅವರ ಕುಟುಂಬಗಳೊಂದಿಗೆ ನಾವು ಯಾವತ್ತೂ ಇರುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಸವಲತ್ತುಗಳನ್ನು ನಮ್ಮ ಸಂಸ್ಥೆ ಒದಗಿಸುತ್ತದೆ ಎಂಬ ಭರವಸೆಯನ್ನು ನಾನು ನೀಡುತ್ತೇನೆ,’’ ಎಂದು ಶುಕ್ಲಾ ಹೇಳಿದರು.

ಸೋಂಕು ತಗುಲದಂತೆ ಎಚ್ಚರವಾಗರಬೇಕಲ್ಲದೆ, ಎಲ್ಲ ಸುರಕ್ಷತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಅವರು ತಮ್ಮ ಅಧಿಕಾರಿಗಳಿಗೆ ತಾಕೀತು ಮಾಡಿದರು. ದೇಶದೆಲ್ಲೆಡೆ ಇರುವ ಸಿಬಿಐ ಕಚೇರಿಗಳನ್ನು ಆಗಿಂದಾಗ್ಗೆ ಸ್ಯಾನಿಟೈಸ್ ಮಾಡುತ್ತಿರಬೇಕು ಮತ್ತು ಅಧಿಕಾರಿಗಳೆಲ್ಲ ಅಗಾಗ ಕೊವಿಡ್-19 ಪರೀಕ್ಷಣೆಗೆ ಒಳಗಾಗಬೇಕು ಎಂದು ರಿಷಿ ಕುಮಾರ್ ಶುಕ್ಲಾ ಹೇಳಿದರು.

ಸಿಬಿಐ ಕೇಂದ್ರ ಕಚೇರಿ

‘ನಿಮ್ಮೆಲ್ಲರ ಶ್ರಮ ಮತ್ತು ಭಗೀರಥ ಪ್ರಯತ್ನಗಳಿಂದಾಗಿ ನಾವು ಕಳೆದ ವರ್ಷ ಬಹಳಷ್ಟು ಕೇಸುಗಳನ್ನು ಇತ್ಯರ್ಥಗೊಳಿಸಿ ನಮ್ಮ ಟಾರ್ಗೆಟ್ ತಲುಪಿದೆವು. ಮುಂಬರುವ ದಿನಗಳಲ್ಲಿ ನಾವು ಇನ್ನಷ್ಟು ಶ್ರಮವಹಿಸಿ ಕೆಲಸ ಮಾಡಬೇಕಿದೆ,’ ಎಂದು ಶುಕ್ಲಾ ಹೇಳಿದರು.

ಕೇರಳದ ಆತ್ಯಂತ ಕ್ಲಿಷ್ಟ ಪ್ರಕರಣವನ್ನು ಉಲ್ಲೇಖಿಸಿದ ಅವರು ಹಲವಾರು ಅಡೆತಡೆಗಳ ಹೊರತಾಗಿಯೂ ಅದನ್ನು ಇತ್ಯರ್ಥಗೊಳಿಸಿದ ಆಧಿಕಾರಿಗಳನ್ನು ಶ್ಲಾಘಿಸಿದರು.

ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅಧಿಕಾರಿಗಳು ಲಭ್ಯವಿರುವ ಆಧುನಿಕ ತಂತ್ರಜ್ಞಾನವನ್ನು ಬಳಸಲು ಪ್ರಾವೀಣ್ಯತೆ ಹೊಂದಬೇಕಿರುವ ಅಗತ್ಯಕ್ಕೆ ಒತ್ತು ನೀಡಿದ ಶುಕ್ಲಾ, ಕೊವಿಡ್-19 ಮಹಾಮಾರಿಯಿಂದಾಗಿ ಈಗ ಆನ್​ಲೈನ್ ಮತ್ತು ವರ್ಚ್ಯುಯಲ್ ಮೂಲಕ ಅನೇಕ ತರಬೇತಿಗಳು ಲಭ್ಯವಿದ್ದು ಅಧಿಕಾರಿ್ಳು ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದರು. ಮೇಲ್ವಿಚಾರಣೆ ವರ್ಗದ ಅಧಿಕಾರಿಗಳು ತನಿಖೆಯಲ್ಲಿ ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳಲು ಹೊಸ ವರ್ಷದ ರೆಸ್ಯೂಲೂಷನ್ ಮಾಡಿಕೊಳ್ಳಬೇಕೆಂದು ಶುಕ್ಲಾ ಸಲಹೆ ನೀಡಿದರು.

ಸಿಬಿಐಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳುವ ಭರವಸೆಯನ್ನೂ ನೀಡಿದ ಶುಕ್ಲಾ ಅವರು, ಬ್ಯಾಂಕುಗಳಲ್ಲಿ ನಡೆಯುತ್ತಿರುವ ಭಾರಿ ಪ್ರಮಾಣದ ವಂಚನೆಗಳು ಸಿಬಿಐ ಎದುರಿರುವ ಹೊಸ ಸವಾಲುಗಳಾಗಿವೆ ಎಂದು ಹೇಳಿ ತಮ್ಮ ಮಾತು ಮುಗಿಸಿದರು.

ಸಭೆಯಲ್ಲಿ ರಿಷಿಕುಮಾರ್ ಶುಕ್ಲಾ ಅವರೊಂದಿಗೆ ಸಿಬಿಐನ ಹೆಚ್ಚುವರಿ ನಿರ್ದೇಶಕರು ಮತ್ತು ಇತರ ಕೆಲ ಅಧಿಕಾರಿಗಳಿದ್ದರು.

Published On - 10:16 pm, Fri, 1 January 21

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ