AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸಿಲಲ್ಲಿ ಫೀಲ್ಡ್​ಗೆ ಇಳಿದ ಸಿಬಿಐ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್​ ಬ್ಯಾನರ್ಜಿಗೆ ನೋಟಿಸ್​

ವೆಸ್ಟರ್ನ್​ ಕೋಲ್​ಫೀಲ್ಡ್​ ಲಿಮಿಟೆಡ್​ ಕಂಪನಿಯ ನಿರ್ವಹಣೆಯಡಿ ಬರುವ ಹಲವಾರು ಗಣಿಗಳಿಂದ ಹಲವು ಸಾವಿರ ಕೋಟಿ ರೂಪಾಯಿ ಮೌಲ್ಯದ ಕಲ್ಲಿದ್ದಲನ್ನು ಕಳವು ಮಾಡಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಚುನಾವಣೆ ಹೊಸಿಲಲ್ಲಿ ಫೀಲ್ಡ್​ಗೆ ಇಳಿದ ಸಿಬಿಐ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್​ ಬ್ಯಾನರ್ಜಿಗೆ ನೋಟಿಸ್​
ಅಭಿಷೇಕ್​ ಬ್ಯಾನರ್ಜಿ
Lakshmi Hegde
|

Updated on: Feb 21, 2021 | 4:36 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದ ಚುನಾವಣೆ (west bengal assembly election 2021) ಗೆ ಒಂದೆರಡು ತಿಂಗಳಷ್ಟೇ ಬಾಕಿ ಇರುವಾಗ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್​ ಬ್ಯಾನರ್ಜಿಯವರಿಗೆ ಕಲ್ಲಿದ್ದಲು ಸ್ಮಗ್ಲಿಂಗ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ (CBI) ನೋಟಿಸ್​ ನೀಡಿದ್ದು, ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅವರ ಪತ್ನಿಗೂ ಸಹ ಸಮನ್ಸ್ ನೀಡಲಾಗಿದೆ. ಅಲ್ಲದೆ, ಸಿಬಿಐ ಅಧಿಕಾರಿಗಳು ದಕ್ಷಿಣ ಕೋಲ್ಕತ್ತದಲ್ಲಿರುವ ಅಭಿಷೇಕ್​ ಬ್ಯಾನರ್ಜಿಯವರ ಮನೆಗೇ ಹೋಗಿ ನೋಟಿಸ್​ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಲ್ಲಿದ್ದಲು ಸ್ಮಗ್ಲಿಂಗ್ ಪ್ರಕರಣದ ತನಿಖೆ ಕಳೆದ ವರ್ಷ ಸೆಪ್ಟೆಂಬರ್​ನಿಂದ ಶುರುವಾಗಿದೆ.

ವೆಸ್ಟರ್ನ್​ ಕೋಲ್​ಫೀಲ್ಡ್​ ಲಿಮಿಟೆಡ್​ ಕಂಪನಿಯ ನಿರ್ವಹಣೆಯಡಿ ಬರುವ ಹಲವಾರು ಗಣಿಗಳಿಂದ ಹಲವು ಸಾವಿರ ಕೋಟಿ ರೂಪಾಯಿ ಮೌಲ್ಯದ ಕಲ್ಲಿದ್ದಲನ್ನು ಕಳವು ಮಾಡಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಡಿ ಸಿಬಿಐ ಡಿಸೆಂಬರ್ 31ರಂದು ತೃಣಮೂಲ ಕಾಂಗ್ರೆಸ್ ಯುವ ನಾಯಕ ವಿನಯ್ ಮಿಶ್ರಾ ಮತ್ತು ಉದ್ಯಮಿಗಳಾದ ಅಮಿತ್ ಸಿಂಗ್​, ನೀರಜ್​ ಸಿಂಗ್​ ನಿವಾಸದ ಮೇಲೆ ದಾಳಿ ನಡೆಸಿತ್ತು. ನೋಟಿಸ್​ ಕೂಡ ನೀಡಿತ್ತು. ಅಲ್ಲದೆ, ಡಿಸೆಂಬರ್ ಪ್ರಾರಂಭದಲ್ಲಿ ಕೋಲ್ಕತ್ತ ಮೂಲದ ಚಾರ್ಟರ್ಡ್​ ಅಕೌಂಟೆಂಟ್​ ಗಣೇಶ್​ ಬಗೇರಿಯಾ ಮನೆ ಹಾಗೂ ಕಚೇರಿಯ ಮೇಲೆ ಕೂಡ ಸಿಬಿಐ ದಾಳಿಯಾಗಿತ್ತು. ಈ ದಂಧೆಯಲ್ಲಿ ಟಿಎಂಸಿ ಯುವ ಮುಖಂಡ, ಸಿಎಂ ಮಮತಾ ಬ್ಯಾನರ್ಜಿಯವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪಾತ್ರವೂ ಇದೆ. ಅವರೂ ಸಹ ತುಂಬ ಲಾಭ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು.

ಅಮಿತ್​ ಶಾಗೆ ಸಮನ್ಸ್​​ ಹೋದ ಒಂದೇ ದಿನದಲ್ಲಿ ನೋಟಿಸ್​! ಈ ಅಕ್ರಮ ಕಲ್ಲಿದ್ದಲು ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಕಳೆದ ಎರಡು ದಿನಗಳ ಹಿಂದೆ 5 ಜಿಲ್ಲೆಗಳ 13 ಪ್ರದೇಶಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಇದೀಗ ಅಭಿಷೇಕ್​ ಬ್ಯಾನರ್ಜಿಯವರಿಗೆ ನೋಟಿಸ್ ನೀಡಿದೆ. 2018ರ ಆಗಸ್ಟ್​ನಲ್ಲಿ ಕೋಲ್ಕತ್ತದಲ್ಲಿರ‍್ಯಾಲಿಯಲ್ಲಿ ಅಮಿತ್ ಶಾ ಭಾಷಣ ಮಾಡಿದ ವೇಳೆ ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಅಭಿಷೇಕ್​ ಬ್ಯಾನರ್ಜಿಯವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಸಂಬಂಧಪಟ್ಟಂತೆ ಫೆ.22ರ ಬೆಳಗ್ಗೆ 10ಗಂಟೆಗೆ ವೈಯಕ್ತಿಕವಾಗಿಯಾದರೂ ಅಥವಾ ವಕೀಲರ ಮೂಲಕವಾದರೂ ಹಾಜರಾಗಬೇಕು ಎಂದು ನಿನ್ನೆ (ಫೆ.20)ರಂದು ಪಶ್ಚಿಮಬಂಗಾಳದ ನಿಯೋಜಿತ ಸಂಸದ/ಶಾಸಕರ ನ್ಯಾಯಾಲಯ ಅಮಿತ್​ ಶಾ ಅವರಿಗೆ ಸಮನ್ಸ್​ ನೀಡಿದೆ. ಅದಾದ ಒಂದೇ ದಿನದಲ್ಲಿ ಅಭಿಷೇಕ್​ ಬ್ಯಾನರ್ಜಿಯವರಿಗೆ ಸಿಬಿಐ ನೋಟಿಸ್​ ನೀಡಿದೆ.

ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರದ ವಿರುದ್ಧ ಸದಾ ಇದೇ ವಿಚಾರಕ್ಕೆ ವಾಗ್ದಾಳಿ ನಡೆಸುತ್ತಿರುತ್ತಾರೆ. ಯಾವುದೇ ಚುನಾವಣೆ ಬರಲಿ, ಬಿಜೆಪಿ ಕೇಂದ್ರ ಸರ್ಕಾರ ತನಿಖಾ ದಳಗಳಿಂದ ದಾಳಿ ಮಾಡಿಸುತ್ತದೆ. ಈ ಮೂಲಕ ಚುನಾವಣೆ ಗೆಲ್ಲಲು ನೋಡುತ್ತದೆ ಎಂದು ಹಿಂದೆಯೂ ಅನೇಕ ಬಾರಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಚಿವ ಜಕೀರ್ ಹುಸೇನ್ ಮೇಲೆ ಕಚ್ಚಾ ಬಾಂಬ್ ದಾಳಿಗೆ ರಾಜಕೀಯ ವೈಷಮ್ಯವೇ ಕಾರಣ: ರೈಲ್ವೆ ಅಧಿಕಾರಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?